ರಾಜ್ಯ ಸಂಪುಟದಲ್ಲಿ ಸಚಿವ ಪುನರ್‌ ರಚನೆ; ಕೋಟ ಶ್ರೀನಿವಾಸ ಪೂಜಾರಿ ದೆಹಲಿಗೆ

1:38 PM, Tuesday, August 18th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

srinivas Poojary ಮಂಗಳೂರು : ರಾಜ್ಯ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಲಾಬಿಗಳು ಈಗಾಗಲೇ ಶುರುವಾಗಿದೆ. ಏತನ್ಮಧ್ಯೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ದಿಢೀರನೇ ದೆಹಲಿಗೆ ತೆರಳಿದ್ದಾರೆ.

ಪುನರ್‌ ರಚನೆ ಶೀಘ್ರದಲ್ಲೇ ಆಗಲಿದ್ದು ಉಡುಪಿಯಿಂದ ಶಾಸಕ ಸುನೀಲ್‌ ಕುಮಾರ್‌ ಕಾರ್ಕಳ, ಹಾಲಾಡಿ ಶ್ರೀನಿವಾಸ ಶೆಟ್ಟಿ ಹಾಗೂ ಸುಳ್ಯದ ಎಸ್‌ ಅಂಗಾರ ಈ ಮೂವರ ಪೈಕಿ ಯಾರಿಗಾದರೂ ಇಬ್ಬರಿಗೆ ಸಚಿವ ಸ್ಥಾನ ದೊರೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದ್ದು ಈಗ ಸಚಿವ ಕೋಟ ಶ್ರೀನಿವಾಸ ಅವರು ದೆಹಲಿಗೆ ತೆರಳಿರುವುದು ಸಚಿವ ಸ್ಥಾನ ಉಳಿಸುವ ಸಲುವಾಗಿ ಎನ್ನಲಾಗಿದೆ.

ಬೈಂದೂರು ಮೆರೈನ್‌ ಯೋಜನೆ ಸೇರಿ ಇಲಾಖೆಯ 1,100 ಕೋಟಿ ರೂ. ಯೋಜನೆಗೆ ಸಮ್ಮತಿ ಪಡೆಯಲು ದೆಹಲಿಗೆ ಹೋಗಿರುವ ಅವರು ಇದರೊಂದಿಗೆ ತಮ್ಮ ಮಂತ್ರಿ ಸ್ಥಾನವನ್ನು ಉಳಿಸುವ ನಿಟ್ಟಿನಲ್ಲಿ ಸಚಿವರಾಗಿ ತಾನು ಮಾಡಿ ಯೋಜನೆ, ಸಾಧನೆಗಳ ಪಟ್ಟಿ ಹಿಡಿದು ದೆಹಲಿಗೆ ತೆರಳಿದ್ದಾರೆ ಎಂದು ಹೇಳಲಾಗಿದೆ.

ತಮ್ಮ ಸಚಿವ ಸ್ಥಾನ ಉಳಿಸುವ ನಿಟ್ಟಿನಲ್ಲಿ ಇಂದು ನರೇಂದ್ರ ಸಿಂಗ್‌ ತೋಮರ್‌ ಅವರನ್ನು ಕೋಟ ಅವರು ಭೇಟಿಯಾಗಲಿದ್ದು ನಾಳೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ರಾಷ್ಟ್ರೀಯ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಅವರನ್ನು ಭೇಟಿಯಾಗಲಿದ್ದಾರೆ.

ಇನ್ನು ಅವರು ರಾಷ್ಟ್ರೀಯ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಕೂಡಾ ಭೇಟಿಯಾಗುವ ಸಮಯವಕಾಶಕ್ಕಾಗಿ ಯತ್ನ ನಡೆಸುತ್ತಿದ್ದಾರೆ ಎಂದು ಎನ್ನಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English