ಕೊರೊನಾ ಸೋಂಕು ಆಗಸ್ಟ್ 24 : ದಕ್ಷಿಣ ಕನ್ನಡ 201, ಉಡುಪಿ 103, ಕಾಸರಗೋಡು 118

10:53 PM, Monday, August 24th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

corona ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ 201 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 10531ಕ್ಕೆ ಏರಿಕೆಯಾಗಿದೆ.

ಸೋಮವಾರ  ಪತ್ತೆಯಾದ ಸೋಂಕಿತರ ಪೈಕಿ ಪ್ರಾಥಮಿಕ ಸಂಪರ್ಕದಿಂದ 49 ಮಂದಿಗೆ ಸೋಂಕು ತಗುಲಿದೆ. 70 ಐಎಲ್‌ಐ ಪ್ರಕರಣಗಳಾಗಿವೆ. 9 ಸಾರಿ ಪ್ರಕರಣಗಳು ದೃಢಪಟ್ಟಿವೆ. 72 ಮಂದಿಯ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ. ಅಂತರ್ ರಾಜ್ಯ ಪ್ರಯಾಣ ಮುಗಿಸಿ ಬಂದ ಓರ್ವ ವ್ಯಕ್ತಿಗೆ ಸೋಂಕು ದೃಢಪಟ್ಟಿದೆ.

ಆಗಸ್ಟ್ 24ರಂದು 241 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 7918 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಆ. 24ರಂದು 6 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು ಸಾವಿನ ಸಂಖ್ಯೆ 316ಕ್ಕೆ ಏರಿಕೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 2269 ಕೊರೊನಾ ಸಕ್ರಿಯ ಪ್ರಕರಣಗಳಿವೆ.

ಉಡುಪಿ ಜಿಲ್ಲೆಯಲ್ಲಿ ಸೋಮವಾರ 103 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಇದರಿಂದಾಗಿ ಒಟ್ಟು ಸೋಂಕಿತರ ಸಂಖ್ಯೆ 10229ಕ್ಕೆ ಏರಿಕೆಯಾಗಿದೆ.

ಸೋಮವಾರ ಪತ್ತೆಯಾದ ಸೋಂಕಿತರ ಪೈಕಿ ಪ್ರಾಥಮಿಕ ಸಂಪರ್ಕದಿಂದ 52 ಮಂದಿಗೆ ಸೋಂಕು ತಗುಲಿದೆ. 23 ಐಎಲ್‌ಐ ಪ್ರಕರಣಗಳಾಗಿವೆ. 2 ಸಾರಿ ಪ್ರಕರಣಗಳು ಪತ್ತೆಯಾಗಿವೆ. ಅಂತರ್ ರಾಜ್ಯ ಪ್ರಯಾಣ ಮುಗಿಸಿ ಬಂದ ಒಬ್ಬರಲ್ಲಿ ಸೋಂಕು ಪತ್ತೆಯಾಗಿದೆ. 156 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಅಲ್ಲದೆ, ಕೊರೊನಾ ಸೋಂಕಿನಿಂದಾಗಿ 5 ಮಂದಿ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.

ಸದ್ಯ ಜಿಲ್ಲೆಯಲ್ಲಿ 2590 ಮಂದಿ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 118 ಮಂದಿಗೆಕೊರೊನಾ ಸೋಂಕು ದೃಢಪಟ್ಟಿದೆ. ಈ ಪೈಕಿ 103 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ ಸೋಂಕು ತಗಲಿದೆ. ಮೂರು ಮಂದಿ ವಿದೇಶ, 12 ಮಂದಿ ಹೊರ ರಾಜ್ಯಗಳಿಂದ ಬಂದವರು ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದ್ದಾರೆ.

ನಾಲ್ಕು ಮಂದಿ ಪೊಲೀಸರು ಹಾಗೂ ನಾಲ್ವರು ಆರೋಗ್ಯ ಸಿಬ್ಬಂದಿಗಳಿಗೆ ಸೋಂಕು ತಗಲಿದೆ. ಕಾಸರಗೋಡು ನಗರಸಭೆ 14, ಮಧೂರು, ಮಂಗಲ್ಪಾಡಿ ತಲಾ 5, ಚೆಂಗಳ, ಚೆಮ್ನಾಡ್, ಪಡನ್ನ ತಲಾ 3, ನೀಲೇಶ್ವರ ನಗರಸಭಾ ವ್ಯಾಪ್ತಿ 20, ತ್ರಿಕ್ಕರಿಪುರ, ಪಿಲಿಕ್ಕೋಡ್ ತಲಾ 8, ಚೆರ್ವತ್ತೂರು 11, ಬದಿಯಡ್ಕ, ಮೊಗ್ರಾಲ್ ಪುತ್ತೂರು, ಕಿನಾನೂರು ಕರಿಂದಲ, ಈಸ್ಟ್ ಎಳೇರಿ, ಕೊಡೋ ಬೇಳೂರು, ಕರಿವೆಳ್ಳೂರು, ಪುಲ್ಲೂರು ಪೆರಿಯ ತಲಾ 1, ಕುಂಬಳೆ, ದೇಲಂಪಾಡಿ ತಲಾ 4, ಪುತ್ತಿಗೆ, ವಳಿಯಪರಂಬ ತಲಾ ಇಬ್ಬರಿಗೆ ಸೋಂಕು ದ್ರಢಪಟ್ಟಿದೆ. 91 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಗೊಂಡಿದ್ದಾರೆ.

ಜಿಲ್ಲೆಯಲ್ಲಿ ಈ ತನಕ ಒಟ್ಟು 4049 ಮಂದಿಗೆ ಕೊರೋನಾ ಪಾಸಿಟಿವ್ ದ್ರಢಪಟ್ಟಿದ್ದು, ಈ ಪೈಕಿ 3206 ಮಂದಿಗೆ ಸಂಪರ್ಕದಿಂದ ಸೋಂಕು ತಗಲಿದೆ. 513 ಮಂದಿ ವಿದೇಶಗಳಿಂದ, 375 ಮಂದಿ ಹೊರ ರಾಜ್ಯಗಳಿಂದ ಬಂದವರು ಇದರಲ್ಲಿ ಒಳಗೊಂಡಿದ್ದಾರೆ. ಇಲ್ಲಿಯ ತನಕ 2980 ಮಂದಿ ಗುಣಮುಖರಾಗಿದ್ದಾರೆ. 31 ಮಂದಿ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ.

ಜಿಲ್ಲೆಯಲ್ಲಿ 5288 ಮಂದಿ ನಿಗಾದಲ್ಲಿದ್ದಾರೆ. 988 ಮಂದಿ ಐಸೋಲೇಷನ್ ವಾರ್ಡ್ ನಲ್ಲಿದ್ದಾರೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English