[1]ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ 297ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 11389ಕ್ಕೆ ಏರಿಕೆಯಾಗಿದೆ.
ಸದ್ಯ ಜಿಲ್ಲೆಯಲ್ಲಿ 2372 ಮಂದಿ ಕೊರೊನಾಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಇಂದು 257 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 8680 ಕ್ಕೆ ಏರಿಕೆಯಾಗಿದೆ.
ಪ್ರಾಥಮಿಕ ಸಂಪರ್ಕದಿಂದ 61ಮಂದಿಗೆ ಸೋಂಕು ದೃಢಪಟ್ಟಿದೆ. 99 ಐಎಲ್ಐ ಪ್ರಕರಣಗಳಾಗಿದ್ದು, 14 ಸಾರಿ ಪ್ರಕರಣಗಳಾಗಿವೆ. ಈ ನಡುವೆ 123ಮಂದಿಯ ಸೋಂಕಿನ ಮೂಲ ಪತ್ತೆಹಚ್ಚಲಾಗುತ್ತಿದೆ.
ಮಂಗಳೂರಿನಲ್ಲಿ 160, ಬಂಟ್ವಾಳ 36, ಸುಳ್ಯ 42, ಪುತ್ತೂರು 14, ಬೆಳ್ತಂಗಡಿ 21 ಮಂದಿಯಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಆ.27ರಂದು ಕೊರೊನಾ ಸೋಂಕಿಗೆ ಮತ್ತೆ 7 ಮಂದಿ ಬಲಿಯಾಗಿದ್ದು, ಒಟ್ಟು ಕೊರೊನಾಗೆ ಬಲಿಯಾದವರ ಸಂಖ್ಯೆ 337ಕ್ಕೆ ಏರಿಕೆಯಾಗಿದೆ.
ಉಡುಪಿ ಜಿಲ್ಲೆಯಲ್ಲಿ ಗುರುವಾರದಂದು 209 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 10906ಕ್ಕೆ ಏರಿಕೆಯಾಗಿದೆ.
ಪ್ರಾಥಮಿಕ ಸಂಪರ್ಕದಿಂದ 78 ಜನರಿಗೆ ಸೋಂಕು ಪತ್ತೆಯಾಗಿದೆ. 62 ಐಎಲ್ಐ ಪ್ರಕರಣಗಳಾಗಿವೆ. 3 ಸಾರಿ ಪ್ರಕರಣ ದೃಢಪಟ್ಟಿದೆ. ಅಂತರ್ ರಾಜ್ಯ ಪ್ರಯಾಣ ಮುಗಿಸಿ ಬಂದ 6 ಮಂದಿಗೆ ಸೋಂಕು ಪತ್ತೆಯಾಗಿದೆ. ಇನ್ನು ಈ ನಡುವೆ 60 ಮಂದಿಯ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ. ಗುರುವಾರರಂದು ಕೋವಿಡ್ ಸೋಂಕಿಗೆ ಮತ್ತೋರ್ವ ಬಲಿಯಾಗಿದ್ದಾರೆ.