- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ವಾಟ್ಸಪ್ ಗ್ರೂಪ್ ನಲ್ಲಿ ಹರಿದಾಡುತ್ತಿದೆ ಕಲ್ಲಡ್ಕ ಪ್ರಭಾಕರ ಭಟ್ ಕೊರೋನಾದಿಂದ ಸಾವಿನ ಸುದ್ದಿ

Kalladka Prabhakara Bhat [1]ಮಂಗಳೂರು :  ಆರ್.ಎಸ್.ಎಸ್. ಮಧ್ಯ ಕ್ಷೇತ್ರೀಯ ಕಾರ್ಯಕಾರಿಣಿ ಸದಸ್ಯ ಕಲ್ಲಡ್ಕ ಪ್ರಭಾಕರ ಭಟ್ ಕೊರೋನಾದಿಂದ ಸಾವನ್ನಪ್ಪಿದ್ದಾರೆ ಎಂದು ಆರ್ ಎಸ್ ಎಸ್ ಟೆರರಿಸ್ಟ್ ಗ್ರೂಪ್ ಎಂಬ ಹೆಸರಿನ ವಾಟ್ಸಪ್ ಗ್ರೂಪ್ ನಲ್ಲಿ ಸುಳ್ಳು ಸುದ್ದಿ ಹಬ್ಬಿಸಲಾಗಿದೆ.

ವಿದೇಶಿ ಮೂಲದ ಸಂಖ್ಯೆಯಲ್ಲಿ ಪ್ರಭಾಕರ ಭಟ್ ಸಾವು ಎಂಬ ಬಗ್ಗೆ ಸುಳ್ಳು ಸುದ್ದಿ ಹರಿದಾಡುತ್ತಿದೆ.

ಈ ಬಗ್ಗೆ  ಪ್ರತಿಕ್ರಿಯಿಸಿದ ಕಲ್ಲಡ್ಕ ಪ್ರಭಾಕರ ಭಟ್, ನಾನು ಆರೋಗ್ಯವಾಗಿದ್ದೇನೆ, ಯಾವುದೇ ತೊಂದರೆಯಿಲ್ಲ. ಪುತ್ತೂರಿನಲ್ಲಿ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೆ, ಸುಳ್ಳು ಸುದ್ದಿ ಹಬ್ಬಿರುವ ಬಗ್ಗೆ ಮಿತ್ರರೊಬ್ಬರಿಂದ ಮಾಹಿತಿ ಸಿಕ್ಕಿತು.

ಕೆಲವೊಂದು ಜನರಿಗೆ  ಇಂಥ ಕೆಲಸ ಮಾಡುವುದರಿಂದ ಸಂತೋಷ ಸಿಗುತ್ತದೆ, ದೂರು ಕೊಡುವ ಬಗ್ಗೆ ಇನ್ನು ಯೋಚಿಸಿಲ್ಲ ಎಂದು ಹೇಳಿದರು.