- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಕೊರೊನಾ ಸೋಂಕು : ದಕ್ಷಿಣ ಕನ್ನಡ 272, ಉಡುಪಿ ಜಿಲ್ಲೆ172

corona [1]ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ಮತ್ತೆ 272 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 12109 ಕ್ಕೆ ಏರಿಕೆಯಾಗಿದೆ.

ಶನಿವಾರ  ಮಂಗಳೂರಿನಲ್ಲಿ 163, ಬಂಟ್ವಾಳದಲ್ಲಿ 30, ಪುತ್ತೂರಿನಲ್ಲಿ 33, ಸುಳ್ಯದಲ್ಲಿ 23, ಬೆಳ್ತಂಗಡಿಯಲ್ಲಿ 11 ಜನರಿಗೆ ಸೋಂಕು ದೃಢಪಟ್ಟಿದ್ದು ಇದನ್ನು ಹೊರತುಪಡಿಸಿ ಇತರೆ ಜಿಲ್ಲೆಯ 12 ಮಂದಿಗೆ ಪಾಸಿಟಿವ್‌ ಆಗಿದೆ.

ಜಿಲ್ಲೆಯಲ್ಲಿ ಶನಿವಾರ  236 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 9209 ಕ್ಕೆ ಏರಿದೆ.

ಜಿಲ್ಲೆಯಲ್ಲಿ ಏಳು ಮಂದಿ ಸೋಂಕಿತರು ಸಾವನ್ನಪ್ಪಿದ್ದು ಈ ಪೈಕಿ ಒಬ್ಬರು ಮಂಗಳೂರಿನವರಾಗಿದ್ದು, ನಾಲ್ವರು ಪುತ್ತೂರಿನವಾದರೆ ಮತ್ತಿಬ್ಬರು ಇತರ ಜಿಲ್ಲೆಯವರಾಗಿದ್ದಾರೆ. ಈವರೆಗೆ 350 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಶನಿವಾರ ಮತ್ತೆ 172 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 11259 ಕ್ಕೆ ಏರಿಕೆಯಾಗಿದೆ.

90 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದ್ದರೆ, 45 ಐಎಲ್‌ಐ, 1 ಸಾರಿ ಪ್ರಕರಣವಾಗಿದೆ. ಇಬ್ಬರು ಅಂತರ್‌ ರಾಷ್ಟ್ರೀಯ ಪ್ರಯಾಣದ ಇತಿಹಾಸ ಹೊಂದಿದ್ದಾರೆ. ಇನ್ನೂ 34 ಮಂದಿಯ ಸೋಂಕಿನ ಮೂಲ ಪತ್ತೆಯಾಗಬೇಕಿದೆ.