ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ ಹರ್ಕೂರು ಮಂಜಯ್ಯ ಶೆಟ್ಟಿ

11:32 AM, Wednesday, September 2nd, 2020
Share
1 Star2 Stars3 Stars4 Stars5 Stars
(5 rating, 1 votes)
Loading...

Manjayya Shettyಕುಂದಾಪುರ:  ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ, ಆಲೂರು – ಹರ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಹರ್ಕೂರು ಮಂಜಯ್ಯ ಶೆಟ್ಟಿ ಅವರು ಅಚ್ಚರಿಯ ಬೆಳವಣಿಗೆಯಲ್ಲಿ ಬೈಂದೂರು ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ ಸಮ್ಮುಖದಲ್ಲಿ ಬುಧವಾರ ಬೆಳಗ್ಗೆ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಶಾಸಕರು ಪಕ್ಷದ ಶಾಲು ಹಾಗೂ ಧ್ವಜವನ್ನು ನೀಡುವ ಮೂಲಕ ಹರ್ಕೂರು ಮಂಜಯ್ಯ ಶೆಟ್ಟಿಯವರನ್ನು ಬಿಜೆಪಿಗೆ ಆತ್ಮೀಯವಾಗಿ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಬೈಂದೂರು ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಜಿ.ಪಂ.‌ಸದಸ್ಯರಾದ ರೋಹಿತ್ ಕುಮಾರ್ ಶೆಟ್ಟಿ, ಶಂಕರ ಪೂಜಾರಿ, ಶೋಭಾ ಜಿ. ಪುತ್ರನ್, ತಾ.ಪಂ.‌ ಉಮೇಶ್ ಶೆಟ್ಟಿ ಕಲ್ಗದ್ದೆ, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English