ಮಂಗಳೂರು ವಿದ್ಯುತ್ ಸರಬರಾಜು ನಿಗಮದ ನಿರ್ದೇಶಕಿ ಸ್ನೇಹಲ್ ಆರ್. ವರ್ಗಾವಣೆ

10:14 PM, Thursday, September 3rd, 2020
Share
1 Star2 Stars3 Stars4 Stars5 Stars
(No Ratings Yet)
Loading...

snehalಮಂಗಳೂರು : ಮಂಗಳೂರು ವಿದ್ಯುತ್ ಸರಬರಾಜು ನಿಗಮ(ಮೆಸ್ಕಾಂ) ನಿರ್ದೇಶಕಿ ಸ್ನೇಹಲ್ ಆರ್. ಅವರನ್ನು ಬೆಂಗಳೂರು ಪಿಯು ಶಿಕ್ಷಣ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ.

ಮಂಗಳೂರು ವಿದ್ಯುತ್ ಸರಬರಾಜು ನಿಗಮ ನೂತನ ನಿರ್ದೇಶಕರಾಗಿ ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನು ನೇಮಕ ಮಾಡಲಾಗಿದೆ. ಪ್ರಶಾಂತ್ ಮಿಶ್ರಾ, 2014ರಲ್ಲಿ ಐಎಎಸ್ ಉತ್ತೀರ್ಣರಾಗಿದ್ದರು. ಈ ಹಿಂದಿನ ನಿರ್ದೇಶಕಿ ಸ್ನೇಹಲ್ ಆರ್. ಅವರನ್ನು ಬೆಂಗಳೂರು ಪಿಯು ಶಿಕ್ಷಣ ನಿರ್ದೇಶಕರಾಗಿ ನೇಮಕ ಮಾಡಿ ಸರಕಾರ ಆದೇಶ ನೀಡಿದೆ. ಸ್ನೇಹಲ್, 2013ನೇ ಐಎಎಸ್ ಬ್ಯಾಚ್ ನವರಾಗಿದ್ದಾರೆ.

ಸ್ನೇಹಲ್ ಅವರು ನಿರ್ದೇಶಕಿಯಾಗಿದ್ದ ಅವದಿಯಲ್ಲಿ ಲಾಕ್ ಡೌನ್ ಸಂದರ್ಭ ಮಂಗಳೂರಿನಲ್ಲಿ ವಿದ್ಯುತ್ ಬಿಲ್ ಸಮಸ್ಯೆ ತಲೆದೋರಿತ್ತು. ಇದನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಅವರು ಶಕ್ತರಾಗಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English