- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಬೈಕಾಡಿ ಜನಾರ್ದನ ಆಚಾರ್ ನಿಧನ

Baikady Janardhana-Achar [1]ಮಂಗಳೂರು : ಆದರ್ಶ ಶಿಕ್ಷಕ, ಶಿಕ್ಷಣ ತಜ್ಞ ಬೈಕಾಡಿ ಜನಾರ್ದನ ಆಚಾರ್ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ರವಿವಾರ ಬೆಳಗ್ಗೆ ನಿಧನರಾದರು.

ಅವರು ಕೆನರಾ ಹೈ ಸ್ಕೂಲ್‌ನಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದಾರೆ. ಚೆನ್ನರಾಯಣ ಪಟ್ಟಣದ ಮಲನಾಡು ಪಿಯು ಕಾಲೇಜು ಸೇರಿದಂತೆ ಹಲವಾರು ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಅಲ್ಲದೆ, ವಿಶ್ವ ಹಿಂದೂ ಪರಿಷತ್‌ನಲ್ಲೂ ಗುರುತಿಸಿಕೊಂಡಿದ್ದರು. ಎಸ್‌ಕೆಜಿಐ ಸೊಸೈಟಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಶಕ್ತಿ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿಯಾಗಿದ್ದ ಅವರು ಆಗಸ್ಟ್ ತಿಂಗಳಲ್ಲಿ ನಿವೃತ್ತಿ ಹೊಂದಿದ್ದರು.

ಶಾಲಾ ದಿನಗಳಿಂದಲೇ ಅನೇಕರಿಗೆ ಸ್ಫೂರ್ತಿ ನೀಡಿದ ಆದರ್ಶ ಶಿಕ್ಷಕರಲ್ಲಿ ಬೈಕಾಡಿ ಒಬ್ಬರು. ಉರ್ವಾದ ಕೆನರಾ ಪ್ರೌಢ ಶಾಲೆಯಲ್ಲಿ ಹಿಂದಿ ಮತ್ತು ಇಂಗ್ಲಿಷ್ ಕಲಿಸುತ್ತಿದ್ದರು. ಅವರು ಆಳವಾದ ಸಾಮರ್ಥ್ಯದ ಬಹು ಪ್ರತಿಭಾನ್ವಿತ ವ್ಯಕ್ತಿ. ಶ್ರೇಷ್ಠ ವಾಗ್ಮಿ, ಬರಹಗಾರ, ತರಬೇತುದಾರ, ಸಂಪಾದಕ, ನಾಟಕಕಾರ, ನಿರ್ದೇಶಕರು, ಶಿಕ್ಷಣ ಮತ್ತು ಸಾಮಾಜಿಕ ಸೇವೆ,  ಆಡಳಿತಾತ್ಮಕವಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದರು. ಅವರು ಮೂರು ದಶಕಗಳಿಗಿಂತಲೂ ಹೆಚ್ಚು ಕಾಲದಿಂದ ಅನೇಕರಿಗೆ ಸ್ಪೂರ್ತಿದಾಯಕ ಮತ್ತು ವಿದ್ಯಾರ್ಥಿಗಳಿಗೆ ಬೆಂಬಲ ನೀಡುತ್ತಿದ್ದರು.

ಮೃತರು ಪತ್ನಿ, ಪುತ್ರ, ಪುತ್ರಿ, ಅಳಿಯ, ಸೊಸೆ ಸಹಿತ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

ಮಂಗಳೂರಿನ ನಂದಿಗುಡ್ಡೆಯ ಸ್ಮಶಾನದಲ್ಲಿ ಅಂತ್ಯ ಸಂಸ್ಕಾರ ನಡೆದಿದೆ.