- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಭೀಮಾ ನದಿಯಲ್ಲಿ ಕೊಚ್ಚಿಹೋದ ಬೈಕಿನಲ್ಲಿ ಹೋಗುತ್ತಿದ್ದ ವ್ಯಕ್ತಿ

Bhima River [1]ವಿಜಯಪುರ:  ವಿಜಯಪುರ ಜಿಲ್ಲೆಯ ಕರ್ನಾಟಕ-ಮಹಾರಾಷ್ಟ್ರದ ಗಡಿ ಭಾಗದಲ್ಲಿನ ಭಂಡಾರಕವಟೆ ಸೇತುವೆ ಬಳಿ ಬೈಕಿನಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬ ಆಯತಪ್ಪಿ ಸೇತುವೆ ಮೇಲಿಂದ ಬಿದ್ದು ಭೀಮಾ ನದಿಯಲ್ಲಿ ಕೊಚ್ಚಿಹೋದ ಘಟನೆನಡೆದಿದೆ.

ಮಹಾರಾಷ್ಟ್ರದ ದಕ್ಷಿಣ ಸೊಲ್ಲಾಪುರ ಜಿಲ್ಲೆಯ ಕಂದಲಗಾಂವ ಗ್ರಾಮದ ಶಂಕರ ಕೋಲೆ(65) ಕೊಚ್ಚಿಹೋದ ವ್ಯಕ್ತಿಯಾಗಿದ್ದು, ಬೈಕ್‍ನಲ್ಲಿ ಭಂಡಾರಕ ವಟೆ ಬಳಿ ಭೀಮಾ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಸೇತುವೆ ಮೇಲೆ ಸಂಚರಿಸುತ್ತಿದ್ದಾಗ ಆಯತಪ್ಪಿ ನದಿಗೆ ಬಿದ್ದು ಅವಘಡ ಸಂಭವಿಸಿದೆ.

ಶಂಕರ ಕೋಲೆ ಮಹಾರಾಷ್ಟ್ರದಿಂದ ನಂದೂರ ಗ್ರಾಮದಿಂದ ಕಂದಲಗಾಂವ ಗ್ರಾಮಕ್ಕೆ ಹೊರಟಿದ್ದ, ವೇಳೆ ಅವಘಢ ಸಂಭವಿಸಿದೆ. ಸ್ಥಳಕ್ಕೆ ಮಹಾರಾಷ್ಟ್ರದ ಮಂದ್ರೂಪ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಚ್ಚಿಹೋದ ವ್ಯಕ್ತಿಗಾಗಿ ಶೋಧ ಕಾರ್ಯವನ್ನು ಅಗ್ನಿಶಾಮಕ ದಳ ಪ್ರಾರಂಭಿಸಿದೆ. ಸೇತುವೆಗೆ ತಡೆಗೋಡೆ ಇಲ್ಲದ ಕಾರಣ ಅವಘಡ ಸಂಭವಿಸಿದ್ದು, ತಡೆಗೋಡೆ ನಿರ್ಮಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.