ವೃದ್ಧಾಶ್ರಮದಲ್ಲಿ ಹುಟ್ಟು ಹಬ್ಬ ಆಚರಿಸಿದ ಮಾಜಿ ಸಚಿವ ಬಿ.ರಮಾನಾಥ ರೈ

11:40 PM, Monday, September 14th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

Ramanatha Rai ಬಂಟ್ವಾಳ:  ಮಾಜಿ ಸಚಿವ ಬಿ.ರಮಾನಾಥ ರೈ ಅವರು ತನ್ನ 68 ನೇ ಹುಟ್ಟು ಹಬ್ಬವನ್ನು ಮೇರಮಜಲುವಿನ ಶ್ರೀ ಮಾತಾ ಲಕ್ಷ್ಮಣಿ ಶಾಂತಿಧಾಮ ವೃದ್ಧಾಶ್ರಮದಲ್ಲಿ ಕೇಕ್ ಕಟ್  ಮಾಡಿ  ಆಶ್ರಮವಾಸಿಗಳೊಂದಿಗೆ ಸಹಭೋಜನವನ್ನು ಮಾಡುವುದರೊಂದಿಗೆ ಆಚರಿಸಿದರು.

ಜೊತೆಗೆ ಬಂಟ್ವಾಳ ತಾಲೂಕಿನಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಮಾಜಿ ಸಚಿವ ಬಿ.ರಮಾನಾಥ ರೈ ಅವರ ಜನ್ಮದಿನವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಿದರು.

ಕಾರ್ಯಕರ್ತರು ಅಲ್ಲಲ್ಲಿ ರಕ್ತದಾನ ಮಾಡುವ ಮೂಲಕ ಗಮನ ಸೆಳೆದರು. ಈ ವೇಳೆ ಮಾತನಾಡಿದ ರೈ, ತಮ್ಮ ಹುಟ್ಟುಹಬ್ಬ ಸಂದರ್ಭ ರಕ್ತದಾನ ಶಿಬಿರ ಏರ್ಪಡಿಸುವ ಮೂಲಕ ಕಾರ್ಯಕರ್ತರು ನನ್ನ ಆಶಯವನ್ನು ಅನುಷ್ಠಾನಕ್ಕೆ ತಂದಿದ್ದಾರೆ. ಮನುಷ್ಯ ಮನುಷ್ಯರೆಲ್ಲರೂ ಒಂದೇ ಎಂಬುದನ್ನು ಸಾಬೀತುಪಡಿಸಿದ್ದಾರೆ ಎಂದರು.

B Ramanatha Rai

ಮೇರಮಜಲುವಿನ ಶ್ರೀ ಮಾತಾ ಲಕ್ಷ್ಮಣಿ ಶಾಂತಿಧಾಮ ವೃದ್ಧಾಶ್ರಮದಲ್ಲಿ ಆಶ್ರಮವಾಸಿಗಳೊಂದಿಗೆ ಸಹಭೋಜನವನ್ನು ರೈ ನಡೆಸಿದರು.

ಕಾಂಗ್ರೆಸ್ ಪ್ರಮುಖರಾದ ಮಿಥುನ್ ರೈ, ಎಂ.ಎಸ್.ಮಹಮ್ಮದ್, ಚಂದ್ರಪ್ರಕಾಶ್ ಶೆಟ್ಟಿ, ಎಂ.ಎಸ್.ಮಹಮ್ಮದ್, ಶಾಲೆಟ್ ಪಿಂಟೋ, ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ ಮಾಣಿ, ಪ್ರಶಾಂತ್ ಕುಲಾಲ್, ಇಬ್ರಾಹಿಂ ನವಾಜ್ ಮೊದಲಾದವರು ಈ ವೇಳೆ ಉಪಸ್ಥಿತರಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English