ಹಿರಿಯಡ್ಕ ಪೇಟೆಯಲ್ಲಿ ಹಾಡುಹಗಲೇ ನಡುರಸ್ತೆಯಲ್ಲಿ ವ್ಯಕ್ತಿಯನ್ನು ಅಟ್ಟಾಡಿಸಿ ಕೊಲೆ

9:07 PM, Thursday, September 24th, 2020
Share
1 Star2 Stars3 Stars4 Stars5 Stars
(6 rating, 2 votes)
Loading...

kishan Hegdeಉಡುಪಿ: ಎರಡು ಇನ್ನೋವಾ ಕಾರುಗಳಲ್ಲಿ ಬಂದ ತಂಡವೊಂದು ಹಿರಿಯಡ್ಕ ಪೇಟೆಯಲ್ಲಿ ಹಾಡುಹಗಲೇ ನಡುರಸ್ತೆಯಲ್ಲಿ ವ್ಯಕ್ತಿಯೋರ್ವನನ್ನು ಅಟ್ಟಾಡಿಸಿ ಮಾರಕಾಯುಧಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.

ಪಡುಬಿದ್ರಿ ಇನ್ನಾದ  ಕಿಶನ್ ಹೆಗ್ಡೆ (42) ಕೊಲೆಯಾದ ವ್ಯಕ್ತಿ. ಈತ ರಿಯಲ್ ಎಸ್ಟೇಟ್ ಉದ್ಯಮವನ್ನು ನಡೆಸುತ್ತಿದ್ದ ಎನ್ನಲಾಗಿದೆ. ಈತನ ಮೇಲೆ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣಗಳಿವೆ, ರೌಡಿ-ಶೀಟರ್ ಎಂದು ಹೇಳಲಾಗಿದೆ.

ಮಂಗಳೂರು ಮೂಲದ ಗ್ಯಾಂಗ್ ಒಂದು ಈ ಹತ್ಯೆ ಮಾಡಿದೆ ಎಂದು ಹೇಳಲಾಗಿದೆ.

ಗುರುವಾರ ಮಧ್ಯಾಹ್ನ ಹಿರಿಯಡ್ಕ ಪೇಟೆಯ ನಡುರಸ್ತೆಯಲ್ಲಿ ತಲೆಗೆ ಮಾರಕಾಸ್ತ್ರಗಳಿಂದ ಹೊಡೆದು ಕೊಲೆಗೈಯಲಾಗಿದೆ. ಎರಡು ಕಾರುಗಳಲ್ಲಿ ಹಿಂಬಾಲಿಸಿಕೊಂಡು ಬಂದ ತಂಡವೊಂದು ಕಿಶನ್ ಹೆಗ್ಡೆಯನ್ನು ಅಡ್ಡಗಟ್ಟಿ ಕೊಲೆ ಮಾಡಿದ್ದಾರೆ ಎಂದು ಹೇಳಲಾಗಿದೆ.

ನಡುರಸ್ತೆಯಲ್ಲಿ ಹಾಡುಹಗಲೇ ವ್ಯಕ್ತಿಯನ್ನು  ಕೊಚ್ಚಿಕೊಲೆ ಕೊಲೆ ಮಾಡಿದವರು ಪರಾರಿಯಾಗಿದ್ದು ಶೋಧಕಾರ್ಯ ಮುಂದುವರಿದಿದೆ.

ಸ್ಥಳಕ್ಕೆ ಹಿರಿಯಡ್ಕ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು ಕೊಲೆಗಾರರು ಪರಾರಿಯಾಗಿದ್ದು ಶೋಧ ಕಾರ್ಯ ನಡುಯುತ್ತಿದೆ. ಕಾರ್ಕಳ ಜೋಡು ರಸ್ತೆ ಬಳಿ ನಾಕಾಬಂಧಿ ಮಾಡಲಾಗಿದೆ.

kishan Hegde

kishan Hegde

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English