ಮಹಿಳೆಯ ಚಿನ್ನದ ಸರ ಎಗರಿಸಿದ ಪ್ರಕರಣ, ಓರ್ವ ಮಹಿಳೆ ಸಹಿತ ನಾಲ್ವರು ಆರೋಪಿಗಳ ಬಂಧನ

10:34 PM, Thursday, September 24th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

Vitla Accucedಬಂಟ್ವಾಳ: ಮಹಿಳೆಯ ಚಿನ್ನದ ಸರ ಎಗರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಮಹಿಳೆ ಸಹಿತ ಒಟ್ಟು ನಾಲ್ವರು ಆರೋಪಿಗಳನ್ನು ವಿಟ್ಲ ಎಸ್ಐ ವಿನೋದ್ ಕುಮಾರ್ ರೆಡ್ಡಿ ನೇತೃತ್ವದ ತಂಡ ಬಂಧಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ತಾಲೂಕಿನ ಸವಣೂರು ನಿವಾಸಿಗಳಾದ ಮಹಮ್ಮದ್ ಶಾಕೀರ್ (23), ಮಹಮ್ಮದ್ ಇಕ್ಬಾಲ್ (24), ಕೆ.ಎ. ಮಹಮ್ಮದ್ ಯಾನೆ ಐಟಿ ಮಮ್ಮು (41) ಆರೋಪಿಗಳಿಗೆ ಸಹಕರಿಸಿದ ತಿಂಗಳಾಡಿ ನಿವಾಸಿ ಹಾಜೀರಾ (44)  ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

ಕುಂಬ್ರದ ಬ್ಯಾಂಕ್ ನಲ್ಲಿ ಅಡವಿಟ್ಟ ಕಳವು ಮಾಡಿದ ಚಿನ್ನ, ಆಕ್ಟೀವ್ ಹೋಂಡಾ ವಾಹನ, 20,650 ನಗದು ವಶಪಡಿಸಲಾಗಿದೆ.

ವಿಟ್ಲ ಮುಡ್ನೂರು ಗ್ರಾಮದ ಕುಂಡಡ್ಕ ಸಮೀಪದ ಮರುವಾಳ ನಿವಾಸಿ ಮಹಿಳೆಯೊಬ್ಬರು ಸೆ.22ರಂದು ಬೀಡಿಕೊಟ್ಟು ಮನೆಗೆ ಹಿಂದಿರುಗುತ್ತಿದ್ದರು. ಈ ವೇಳೆ ಕುಂಡಡ್ಕ ಭಾಗದಿಂದ ದ್ವಿಚಕ್ರ ವಾಹನದಲ್ಲಿ ಬಂದ ವ್ಯಕ್ತಿಯೊಬ್ಬ ಕುತ್ತಿಗೆಯಲ್ಲಿದ್ದ 4 ಪವನ್ ತೂಕದ ಚಿನ್ನದ ಸರವನ್ನು ಕದ್ದು ಪರಾರಿಯಾಗಿದ್ದನು.ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಮಹಿಳೆ ದೂರು ನೀಡಿದ್ದರು. ತನಿಖೆ ಕೈಗೆತ್ತಿಕೊಂಡ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಟ್ವಾಳ ವೃತ್ತ ನಿರೀಕ್ಷಕ ನಾಗರಾಜ್ ಟಿ.ಡಿ ಮಾರ್ಗದರ್ಶನದಲ್ಲಿ ವಿಟ್ಲ ಎಸೈ ವಿನೋದ್ ಕುಮಾರ್ ರೆಡ್ಡಿ, ಡಿಸಿಐಬಿ ತಂಡದ ಪ್ರವೀಣ್ ರೈ, ವಿಟ್ಲ ಪೊಲೀಸ್ ಠಾಣೆಯ ಪ್ರಸನ್ನ, ಗಿರೀಶ್, ಲೋಕೇಶ್ ,ವಿನಾಯಕ, ಪ್ರತಾಪ್ ರೆಡ್ಡಿ ತಂಡ ಕಾರ್ಯಾಚರಣೆಯಲ್ಲಿ ಭಾಗವಹಿಸಿತ್ತು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English