ವಿಶ್ವ ಹಿಂದೂ ಪರಿಷತ್ ಕಾಸರಗೋಡು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಅಂಗಾರ ಶ್ರೀಪಾದ ನಿಧನ

5:58 PM, Monday, September 28th, 2020
Share
1 Star2 Stars3 Stars4 Stars5 Stars
(No Ratings Yet)
Loading...

Angara Sripadaಕಾಸರಗೋಡು : ಉಪ್ಪಳ ಬಾಯಾರಿನ ಪೆರ್ವೋಡಿ ನಿವಾಸಿ ಅಂಗಾರ ಶ್ರೀಪಾದ (69) ಅಲ್ಪಕಾಲದ ಅಸೌಖ್ಯದಿಂದ ಸೋಮವಾರ ಬೆಳಗ್ಗೆ ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಬಾಯಾರು ಸಹಕಾರಿ ಬ್ಯಾಂಕ್ ನ ನಿರ್ದೇಶಕರೂ ಆಗಿದ್ದ ಇವರು ಈ ಹಿಂದೆ ಕಂದಾಯ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದರು. ಕಳೆದ ಹತ್ತು ವರ್ಷಗಳಿಂದ ವಿಶ್ವ ಹಿಂದೂ ಪರಿಷತ್ ನ ಕಾಸರಗೋಡು ಜಿಲ್ಲಾಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದರು.

ಮೃತರು ಪತ್ನಿ, ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English