- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಕೊರೊನಾ ಸೋಂಕು : ದಕ್ಷಿಣ ಕನ್ನಡ ಜಿಲ್ಲೆ – 258, ಸಾವು 9, ಉಡುಪಿ ಜಿಲ್ಲೆ – 158, ಸಾವು 3, ಕಾಸರಗೋಡು -257

Corona [1]ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 258 ಮಂದಿಗೆ ಕೊರೊನಾ ದೃಢಪಟ್ಟಿದ್ದು 9 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ಮೃತರ ಸಂಖ್ಯೆ 566 ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 24,019 ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಇಂದು 344 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ. ಈವರೆಗೆ 17,709 ಮಂದಿ ಗುಣಮುಖರಾದಂತಾಗಿದೆ. ಜಿಲ್ಲೆಯಲ್ಲಿ 5,744 ಮಂದಿ ಕೊರೊನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ ಒಟ್ಟು 4,361 ಮಾಸ್ಕ್ ಉಲ್ಲಂಘನೆ ಪ್ರಕರಣ ವರದಿಯಾಗಿದ್ದು, 5,30,885 ದಂಡ ವಸೂಲಿ ಮಾಡಲಾಗಿದೆ.

ಉಡುಪಿ ಜಿಲ್ಲೆಯಲ್ಲಿ 158 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಇದರಿಂದ ಜಿಲ್ಲೆಯಲ್ಲಿ ಈವರೆಗೆ ಪಾಸಿಟಿವ್ ದೃಢಪಟ್ಟವರ ಸಂಖ್ಯೆ 17,789ಕ್ಕೇರಿದೆ. ಅಲ್ಲದೇ ದಿನದಲ್ಲಿ 297 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆ ಗೊಂಡಿದ್ದು, ಹೀಗೆ ಮನೆಗೆ ತೆರಳಿದರ ಒಟ್ಟು ಸಂಖ್ಯೆ 15,662ಕ್ಕೇರಿದೆ.

ಮೂರು ಬಲಿ: ಜಿಲ್ಲೆಯಲ್ಲಿ ಸದ್ಯ 1973 ಸಕ್ರೀಯ ಕೋವಿಡ್ ಪ್ರಕರಣಗಳಿವೆ. ಶನಿವಾರ ಜಿಲ್ಲೆಯಲ್ಲಿ ಮೂವರು ಕೊರೋನ ಸೋಂಕಿಗೆ ಬಲಿಯಾಗಿದ್ದು, ಇದರಿಂದ ಈವರೆಗೆ ಕೋವಿಡ್‌ಗೆ ಬಲಿಯಾದವರ ಒಟ್ಟು ಸಂಖ್ಯೆ 154ಕ್ಕೇರಿದೆ.

ಜಿಲ್ಲೆಯ 39, 67 ಹಾಗೂ 65 ವರ್ಷ ಪ್ರಾಯದ ಪುರುಷರು ಕೊರೋನ ಸೋಂಕು ದೃಢಪಟ್ಟ ಬಳಿಕ ಅ.1 ರಂದು ಮೃತಪಟ್ಟಿದ್ದಾರೆ. 67 ವರ್ಷದ ವೃದ್ಧರು ಸೆ.20ರಂದು ಚಿಕಿತೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರೆ, 39 ವರ್ಷ ಪ್ರಾಯದ ಯುವ ಸೆ.26ರಂದು ಬೇರೆ ಸಮಸ್ಯೆಗೆ ಚಿಕಿತ್ಸೆಗೆ ದಾಖಲಾಗಿದ್ದರು. 65ವರ್ಷ ಪ್ರಾಯದ ವೃದ್ಧರು ಅ.1ರಂದು ಆಸ್ಪತ್ರೆಗೆ ಬಂದು ಚಿಕಿತ್ಸೆ ಪ್ರಾರಂಭಿಸುವ ಮೊದಲೇ ಸೋಂಕಿಗೆ ಬಲಿಯಾಗಿದ್ದರು.

ಕಾಸರಗೋಡು ಜಿಲ್ಲೆಯಲ್ಲಿ ಶನಿವಾರ 257 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 11,911ಕ್ಕೆ ಏರಿದೆ.