- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಶ್ರೀಗಂಧದ ಮರವನ್ನು ಕದಿಯಲು ಮನೆಯ ಯಜಮಾನನನ್ನೇ ಕೊಂದ ಕಳ್ಳರು

ShivaBasappa [1]ಚಾಮರಾಜನಗರ: ಮರ ಕಳ್ಳರು ಮನೆ ಮುಂದಿದ್ದ ಶ್ರೀಗಂಧದ ಮರವನ್ನು ಕದಿಯಲು ಮನೆಯ ಯಜಮಾನ ವೃದ್ಧನನ್ನು ಕೊಂದಿರುವ ಘಟನೆ ಚಾಮರಾಜನಗರ ತಾಲೂಕಿನ ಚಂದಕವಾಡಿಯಲ್ಲಿ ನಡೆದಿದೆ.

ಚಂದಕವಾಡಿ ಗ್ರಾಮದ ವೃದ್ಧ ಶಿವಬಸಪ್ಪ(75) ಕೊಲೆಯಾದವರು.

ಮನೆ ಮುಂದೆ ಇದ್ದ ಶ್ರೀಗಂಧದ ಮರವನ್ಬು ಕದಿಯಲು ಬಂದಿದ್ದ ವೇಳೆ ಮನೆ ಹೊರಗಡೆ ಮಲಗಿದ್ದ ವೃದ್ಧ ಶಿವಬಸಪ್ಪನ ಕೈ-ಕಾಲು ಕಟ್ಟಿ, ಪಂಚೆಯಿಂದ ಉಸಿರುಗಟ್ಟಿಸಿ ಕೊಂದು ಮಾಳವೊಂದರಲ್ಲಿ ಬಿಸಾಡಿದ್ದಾರೆ ಎಂದು ತಿಳಿದುಬಂದಿದೆ.

ಶ್ವಾನದಳ ವೃದ್ಧನ ಮೃತದೇಹ ಪತ್ತೆ ಮಾಡಿದೆ. ಕಳ್ಳರು ಶ್ರೀಗಂಧದ ಮರವನ್ನು ಅರ್ಧ ಕತ್ತರಿಸಿ ಪರಾರಿಯಾಗಿದ್ದಾರೆ. ಚಾಮರಾಜನಗರ ನಗರದ ರಾಮಸಮುದ್ರ ಪೂರ್ವ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.