ತವರಿನಿಂದ ಹಣ ತರಲು ಹೇಳಿದ ಬೆನ್ನಲ್ಲೇ ಅನುಮಾನಾಸ್ಪದವಾಗಿ ಸಾವನ್ನಪ್ಪಿದ 20 ರ ಮಹಿಳೆ

2:27 PM, Wednesday, October 7th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

Manjula ಮೈಸೂರು: ಪ್ರೀತಿಸಿ ಮದುವೆಯಾದ ಮಹಿಳೆಯಲ್ಲಿ  ತವರಿನಿಂದ ಹಣ ತರಲು ಹೇಳಿದ ಬೆನ್ನಲ್ಲೇ  ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ವರುಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸಾವನ್ನಪ್ಪಿದ ಮಹಿಳೆ 20 ವರ್ಷದ ಮಂಜುಳಾ ಎಂದು ಗುರುತಿಸಲಾಗಿದೆ.

ಹಳ್ಳಿಕೆರೆಹುಂಡಿಯ ನಿವಾಸಿಯಾಗಿದ್ದ ಮಂಜುಳಾ ಮತ್ತು ಮೆಲ್ಲಹಳ್ಳಿ ಗ್ರಾಮದ ಹೇಮಂತ್ ಪ್ರೀತಿಸಿ ಮದುವೆಯಾಗಿದ್ದರು. ಕೆಲ ದಿನಗಳ ಹಿಂದೆ ಹೇಮಂತ್ ಪತ್ನಿಗೆ ತವರಿನಿಂದ ಹಣ ತರಲು ಹೇಳಿದ್ದನಂತೆ. ಮಂಜುಳಾ ತಂದೆ ಸಹ ಒಂದು ತಿಂಗಳಲ್ಲಿ ಹಣ ನೀಡುವದಾಗಿ ಹೇಳಿದ್ದರು ಎನ್ನಲಾಗಿದೆ.

ಆದ್ರೆ ಮಂಜುಳಾ ಮಂಗಳವಾರ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಇಬ್ಬರ ಪ್ರೀತಿಯ ಸಂಕೇತವಾಗಿ ದಂಪತಿಗೆ ಒಂದು ಮಗುವಿದೆ.

ಸಾವಿನ ಬಗ್ಗೆ ಮಂಜುಳಾ ಕುಟುಂಬಸ್ಥರಿಗೆ ಯಾವುದೇ ಮಾಹಿತಿ ನೀಡದೇ ಹೇಮಂತ್ ಮನೆಯವರು ಅಂತ್ಯಕ್ರಿಯೆಗೆ ಮುಂದಾಗಿದ್ದರು.

ಮಗಳ ಸಾವಿನ ಸುದ್ದಿ ತಿಳಿದು ಮಂಜುಳಾ ಪೋಷಕರು ಪೊಲೀಸರಿಗೆ ಮಾಹಿತಿ ನೀಡಿ ಅಂತ್ಯಕ್ರಿಯೆ ನಿಲ್ಲಿಸಿದ್ದಾರೆ. ಸದ್ಯ ಪೊಲೀಸರು ಮೃತದೇಹವನ್ನು ಮರಣೋತ್ತರ ಶವ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಮಗಳನ್ನು ಕೊಲೆ ಮಾಡಲಾಗಿದೆ ಎಂದು ಮಂಜುಳಾ ಪೋಷಕರು ಆರೋಪಿಸಿದ್ದಾರೆ. ಮಂಜುಳಾ ಪತಿ ಹೇಮಂತ್, ಮಾವ ಪುಟ್ಟಸ್ವಾಮಿ, ಅತ್ತೆ ಭಾಗ್ಯ, ಮೈದುನ ಯಶವಂತ್ ವಿರುದ್ಧ ವರುಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಮಂಜುಳಾ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English