ಆಟೊ ರಿಕ್ಷಾ ಡಿಕ್ಕಿ : ಚಾಲಕ ಸಾವು, ಮೂವರಿಗೆ ಗಂಭೀರ ಗಾಯ

4:07 PM, Wednesday, October 7th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

AutoRikshawಮಂಗಳೂರು  : ಆಟೊ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟ ಘಟನೆ ಬಿಕರ್ನಕಟ್ಟೆ ಬಳಿ ಬುಧವಾರ ಬೆಳಗ್ಗೆ ಸಂಭವಿಸಿದೆ.

ರಿಕ್ಷಾ ಚಾಲಕ ವಳಚ್ಚಿಲ್ ಪದವು ನಿವಾಸಿ ಸಲೀಂ ಮೃತಪಟ್ಟವರು.

ಘಟನೆಯಲ್ಲಿ ಶಿಹಾಬ್ ಮತ್ತು ನಿಝಾಮುದ್ದೀನ್ ಎಂಬವರು ಗಾಯಗೊಂಡಿದ್ದಾರೆ. ಈ ಪೈಕಿ ಶಿಹಾಬ್‌ಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಮಲ್ಪೆಯಿಂದ ಆಟೊ ರಿಕ್ಷಾದಲ್ಲಿ ಮೀನು ಹೇರಿಕೊಂಡು ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಬಿಕರ್ನಕಟ್ಟೆ ತಲುಪಿದಾಗ ಆಟೊ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಲ್ಲಿಸಿದ್ದ ಲಾರಿಗೆ ಢಿಕ್ಕಿ ಹೊಡೆಯಿತೆನ್ನಲಾಗಿದೆ. ಬಳಿಕ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಗೂ ಢಿಕ್ಕಿ ಹೊಡೆದಿದೆ. ಇದರಿಂದ ಗಂಭೀರ ಗಾಯಗೊಂಡ ಸಲೀಂ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಅಪಘಾತದ ತೀವ್ರತೆಗೆ ರಿಕ್ಷಾದ ಮುಂಭಾಗದ ಸಂಪೂರ್ಣ ನಜ್ಜುಗುಜ್ಜಾಗಿದೆ.

AutoRikshaw

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English