ಸುಳ್ಯ : ಜಾಮೀನು ಪಡೆದು ಹೊರಗೆ ಬಂದಿದ್ದ ಕೊಲೆ ಪ್ರಕರಣದ ಆರೋಪಿಯನ್ನು ಗುಂಡಿಟ್ಟು ಕೊಲೆ ಮಾಡಿದ ಅಪರಿಚಿತರು

12:39 PM, Thursday, October 8th, 2020
Share
1 Star2 Stars3 Stars4 Stars5 Stars
(4 rating, 1 votes)
Loading...

sampath ಮಂಗಳೂರು: ಜಾಮೀನು ಪಡೆದು ಹೊರಗೆ ಬಂದಿದ್ದ ಕೊಲೆ ಪ್ರಕರಣದ ಆರೋಪಿಯ ಮೇಲೆ ಅಪರಿಚಿತ ವ್ಯಕ್ತಿಗಳು ಗುಂಡಿಟ್ಟು ಕೊಲೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದಿದೆ.

ಕೊಲೆಯಾದ ವ್ಯಕ್ತಿಯನ್ನು ಸಂಪತ್‌ ಕುಮಾರ್‌ (35) ಎಂದು ಗುರುತಿಸಲಾಗಿದೆ.

ಬೆಳಗ್ಗೆ 6  ಗಂಟೆ ಸುಮಾರಿಗೆ ಸಂಪತ್‌ ಅವರು ಮನೆಯಿಂದ ಹೊರಡುವ ವೇಳೆ ಅಪರಿಚಿತರು ಕಾರಿನ ಮೇಲೆ ದಾಳಿ ನಡೆಸಿದ್ದರು. ಈ ಸಂದರ್ಭ ಕಾರು ನಿಯಂತ್ರಣ ತಪ್ಪಿ  ರಸ್ತೆ ಬದಿಗೆ ಸರಿದಿದೆ. ನಂತರವೂ ಗುಂಡಿನ ಸದ್ದು ಕೇಳಿದೆ ಎಂದು ಸ್ಥಳೀಯರು  ತಿಳಿಸಿದ್ದಾರೆ.  ಸುಳ್ಯ ತಾಲೂಕಿನ ಶಾಂತಿನಗರದಲ್ಲಿ ಈ ಘಟನೆ ನಡೆದಿದೆ. ದುಷ್ಕರ್ಮಿಗಳ ಗುಂಡಿನ ದಾಳಿಯಲ್ಲಿ ಆರೋಪಿ ಸಂಪತ್ ಕುಮಾರ್ ಸಾವನ್ನಪ್ಪಿದ್ದಾನೆ.

ಸಂಪತ್ ಕುಮಾರ್ ಕೊಡಗಿನ ಬಿಜೆಪಿ ಮುಖಂಡ ಬಾಲಚಂದ್ರ ಕಳಗಿ ಕೊಲೆ ಆರೋಪಿ. ಈತ ಜಾಮೀನು ಪಡೆದು ಹೊರಗೆ ಬಂದಿದ್ದ. ಕಾರಿನಲ್ಲಿ ಬಂದ ನಾಲ್ವರ ತಂಡದಿಂದ ಗುಂಡಿನ ದಾಳಿ ನಡೆದಿದ್ದು, ಸಂಪತ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಸ್ಥಳಕ್ಕೆ ಸುಳ್ಯ ಪೊಲೀಸರು, ಎಫ್‍ಎಸ್‍ಎಲ್ ತಂಡ ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ವಶಕ್ಕೆ ಪಡೆಯಲಾಗಿದೆ.

sampath

sampath

sampath

sampath

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English