ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಸರ್ಪ ಸಂಸ್ಕಾರ ಅರ್ಚಕ ನೇಣಿಗೆ ಶರಣು

11:05 PM, Thursday, October 8th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

sarpa samskaaraಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಸರ್ಪ ಸಂಸ್ಕಾರ ಕೆಲಸ ನಿರ್ವಹಿಸುತ್ತಿದ್ದ ಅರ್ಚಕರೊಬ್ಬರು ತಾನು ವಾಸವಿದ್ದ ಬಾಡಿಗೆ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ  ಗುರುವಾರ ಸಂಜೆ ವರದಿಯಾಗಿದೆ.

ಉಪ್ಪಿನಂಗಡಿ ನಾಳ ನಿವಾಸಿಯಾದ ಕೃಷ್ಣ ಮಯ್ಯ ಭಟ್ (55) ಕಳೆದ ಐದು ವರ್ಷಗಳಿಂದ ಕುಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ ಸರ್ಪಸಂಸ್ಕಾರ ಕ್ರಿಯಾಕರ್ತನಾಗಿ ಕೆಲಸ ನಿರ್ವಹಿಸುತ್ತಿದ್ದರು. ಗುರುವಾರ ತಾನು ವಾಸವಿದ್ದ ಬಾಡಿಗೆ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೆ ಸ್ಪಷ್ಟ ಕಾರಣ ಇನ್ನೂ ತಿಳಿದು ಬಂದಿಲ್ಲ.

ಘಟನಾ ಸ್ಥಳಕ್ಕೆ ಕುಕ್ಕೆ ಸುಬ್ರಹ್ಮಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

sarpa samskaara

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English