ಮಾನಸಿಕವಾಗಿ ನೊಂದ ಹದಿಮೂರರ ಬಾಲಕಿ ಆತ್ಮಹತ್ಯೆಗೆ ಶರಣು

11:37 PM, Thursday, October 8th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

pooja ಮೂಡುಬಿದಿರೆ : ಸಹೋದರಿ ಬುದ್ದಿ ಮಾತು ಹೇಳಿದ ಕಾರಣ  ಮಾನಸಿಕವಾಗಿ ನೊಂದ ಬಾಲಕಿಯೋರ್ವಳು ಆತ್ಮಹತ್ಯೆಗೆ ಶರಣಾದ ಘಟನೆ ಮೂಡುಮಾರ್ನಾಡಿನ ಗುಡ್ಡದ ಮೇಲು ಎಂಬಲ್ಲಿ ಗುರುವಾರ ನಡೆದಿದೆ.

ಕರುಣಾಕರ ಹಾಗೂ ಸುಶೀಲಾ ದಂಪತಿಯ ಪುತ್ರಿ ಪೂಜಾ(13) ಆತ್ಮಹತ್ಯೆ ಮಾಡಿಕೊಂಡ ಬಾಲಕಿ.

ಪೂಜಾ ಮಧ್ಯಾಹ್ನ ತನ್ನ ಸಂಬಂಧಿಕರ ಮಕ್ಕಳೊಂದಿಗೆ ಆಟವಾಡುತ್ತಾ ಅವರೊಂದಿಗೆ ಜಗಳವಾಡಿ ಹೊಡೆದು ತೊಂದರೆ ನೀಡುತ್ತಿದ್ದಳು. ಸಣ್ಣ ಮಕ್ಕಳಿಗೆ ತೊಂದರೆ ಕೊಡಬಾರದು ಎಂದು ಸಹೋದರಿ ಬುದ್ಧಿ ಮಾತು ಹೇಳಿದ್ದಾರೆ. ಇದರಿಂದಾಗಿ ಖಿನ್ನತೆಗೆ ಒಳಗಾದ ಪೂಜಾ ಮನೆ ಬಳಿ ಇರುವ ಹಾಡಿಯಲ್ಲಿ ಮರದ ಕೊಂಬೆಗೆ ಚೂಡಿದಾರ ಶಾಲ್‍ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಈ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English