ನಾಥ ಪಂಥದ ಗುರು ಹಾಗೂ ಹಿಂದೂ ಧರ್ಮದ ನಿಂದನೆ ಯುವ ಕಾಂಗ್ರೆಸ್​ ಅಧ್ಯಕ್ಷ ಮಿಥುನ್ ರೈ ವಿರುದ್ಧ ದೂರು

11:08 PM, Saturday, October 10th, 2020
Share
1 Star2 Stars3 Stars4 Stars5 Stars
(No Ratings Yet)
Loading...

Mithun-Raiಪುತ್ತೂರು : ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಅವಮಾನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ವಿರುದ್ಧ ದೂರು ದಾಖಲಾಗಿದೆ.

ಹಿಂದೂ ಜಾಗರಣ ವೇದಿಕೆಯ ಪ್ರಧಾನ ಕಾರ್ಯದರ್ಶಿ ಅವಿನಾಶ್ ಪುರುಷರ ಕಟ್ಟೆ, ಮಿಥುನ್ ರೈ ವಿರುದ್ಧ ಕ್ರಮ ಕೈಗೊಳ್ಳುವಂತೆ  ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮಿಥುನ್ ರೈ ಅವಹೇಳನಕಾರಿಯಾಗಿ ಮಾತನಾಡಿರುವುದು ಹಿಂದೂ ಧರ್ಮದ ಅನುಯಾಯಿಗಳ ಭಾವನೆಗೆ ಧಕ್ಕೆಯಾಗಿದೆ. ಯೋಗಿ ಆದಿತ್ಯನಾಥ್ ಹಿಂದೂ ಧರ್ಮದ ಹಾಗೂ ನಾಥ ಪಂಥದ ಗುರುವಾಗಿದ್ದು, ಸ್ವಾಮೀಜಿ ಸ್ಥಾನದಲ್ಲಿರುವ ಅವರ ವಿರುದ್ಧ  ಹೇಳಿಕೆ ನೀಡಿರುವುದು ಸಮಸ್ತ ಹಿಂದೂಗಳ ಭಾವನೆಯನ್ನು ಕೆರಳಿಸುವಂಥದ್ದು ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ತೊಕ್ಕೋಟಿನಲ್ಲಿ  ಉತ್ತರ ಪ್ರದೇಶದ ಹಥ್ರಾಸ್ನಲ್ಲಿ ದಲಿತ ಯುವತಿಯ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಸಂಬಂಧ ಪ್ರತಿಭಟನೆಯನ್ನು ಉದ್ದೇಶಿಸಿ ಮಿಥುನ್ ರೈ ಮಾತನಾಡಿದ್ದರು.

ಯೋಗಿ ಆದಿತ್ಯನಾಥ ಒಬ್ಬ ಗಂಡಸಾ, ಆವ ಓರ್ವ ಅಯೋಗ್ಯ, ಅವ ಒಬ್ಬ ಹಿಂದೂ ಎಂದು ಹೇಳಲು ನಾಚಿಕೆಯಾಗುತ್ತದೆ. ಆತ ಕರ್ನಾಟಕ ಹಾಗೂ ದಕ್ಷಿಣ ಕನ್ನಡಕ್ಕೆ ಬಂದರೆ ಆತನ ಮುಖಕ್ಕೆ ಮಸಿ ಬಳಿಯುವುದಾಗಿ ಹೇಳಿಕೆ ನೀಡಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English