ಮೊಬೈಲ್ ಬಳಸಬೇಡ ಎಂದು ಅಮ್ಮ ಬುದ್ದಿವಾದ ಹೇಳಿದ್ದಕ್ಕೆ ಆತ್ಮಹತ್ಯೆ

11:43 PM, Wednesday, October 14th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

mobile addictಮಂಗಳೂರು : ಅತಿಯಾಗಿ ಮೊಬೈಲ್ ಬಳಸಬೇಡ ಎಂದು ಅಮ್ಮ ಬುದ್ದಿವಾದ ಹೇಳಿದ್ದಕ್ಕೆ 10 ನೇ ತರಗತಿ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಳಾಯಿಯಲ್ಲಿ ನಡೆದಿದೆ.

ಕುಳಾಯಿಯ ಗೋಕುಲನಗರದ ಸುಜೇತಾ (16 ) ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಈಕೆ ಸುರತ್ಕಲ್ನ ಖಾಸಗಿ ಪ್ರೌಢಶಾಲೆಯಲ್ಲಿ 10 ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ಮೊಬೈಲ್ನಲ್ಲೇ ಹೆಚ್ಚಿನ ಸಮಯ ಕಳೆಯುತ್ತಿದ್ದ ಸಜೇತಾಗೆ, ತಾಯಿ ಬುದ್ದಿವಾದ ಹೇಳಿದ್ದರು ಎನ್ನಲಾಗಿದೆ.

ತಾಯಿಯ ಬುದ್ದಿಮಾತಿಗೆ ಬೇಸರಗೊಂಡ ಬಾಲಕಿ, ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತಾಯಿ ಮನೆಯ ಟೆರೆಸ್ ಮೇಲೆ ಹೋದ ಸಂದರ್ಭದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರ ಗೊತ್ತಾಗಿದೆ.

ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English