ಕುಕ್ಕೆ ಸುಬ್ರಹ್ಮಣ್ಯ ಮಠದ ಬಳಿ ಬೆಂಗಳೂರು ಮೂಲದ ಯುವಕ ಆತ್ಮಹತ್ಯೆ

7:06 PM, Sunday, October 18th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

Ranganathಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯ ದ ಉತ್ತರಾದಿ ಮಠದ ಬಳಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ಮದ್ಯಾಹ್ನ ಸಂಭವಿಸಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಬೆಂಗಳೂರು ಮೂಲದ ರಂಗನಾಥ್ (25) ಎಂದು ಗುರುತಿಸಲಾಗಿದೆ. ಈತ ವಾರದ ಹಿಂದೆ ಮನೆ ಬಿಟ್ಟು ಸುಬ್ರಹ್ಮಣ್ಯಕ್ಕೆ ಬಂದಿದ್ದ ಎಂದು ತಿಳಿದು ಬಂದಿದೆ. ಈತನ ಆತ್ಮಹತ್ಯೆ ಗೆ ಕಾರಣ ಏನೆಂದು ತಿಳಿದು ಬಂದಿಲ್ಲ.

ಮೃತ ದೇಹವನ್ನು ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕೊಂಡೊಯ್ಯಲಾಗಿದೆ. ಘಟನಾ ಸ್ಥಳಕ್ಕೆ ಸುಬ್ರಹ್ಮಣ್ಯ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English