- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ವಾಸ್ತುದೋಷದಿಂದ ಬಂಟ್ವಾಳ ತಾಲೂಕು ಕಚೇರಿಯ ಇಬ್ಬರು ಉಪತಹಶೀಲ್ದಾರ್ ಗಳ ಸಾವು

Bantwala TP [1]ಬಂಟ್ವಾಳ: ಪ್ರಶ್ನಾಚಿಂತನೆಯಲ್ಲಿ ತಾಲೂಕು ಕಚೇರಿಯಲ್ಲಿ ವಾಸ್ತುದೋಷ ಕಂಡು ಬಂದಿದೆ ಎಂದು ಸಂಕಲ್ಪಿಸಿ ಜಿ.ಪಂ.ಸದಸ್ಯ ಎಂ.ತುಂಗಪ್ಪ ಬಂಗೇರ ಅವರ ನೇತೃತ್ವದಲ್ಲಿ ಬಿ.ಸಿ.ರೋಡಿನ ಶ್ರೀ ರಕ್ತೇಶ್ವರೀ ಸನ್ನಿಧಿಯಲ್ಲಿ ಸೋಮವಾರ  ಬೆಳಗ್ಗೆ ಮಹಾ ಮೃತ್ಯುಂಜಯ ಹೋಮ ನಡೆಯಿತು.

ಕಳೆದ ಕೆಲವು ತಿಂಗಳ ಹಿಂದೆ ತಾಲೂಕು ಕಚೇರಿಯ ಇಬ್ಬರು ಉಪತಹಶೀಲ್ದಾರ್ ಗಳು ಅನಾರೋಗ್ಯದಿಂದ ಮೃತಪಟ್ಟಿದ್ದು, ಹೀಗಾಗಿ ಜಿಲ್ಲಾ ಪಂಚಾಯತ್ ಸದಸ್ಯರು ಪ್ರಶ್ನಾಚಿಂತನೆ ನಡೆಸಿದ್ದರು.

ಶ್ರೀ ವೆಂಕಟರಮಣ ಮುಚ್ಚಿನ್ನಾಯರ ಪ್ರಶ್ನಾಚಿಂತನೆಯಲ್ಲಿ ಕಂಡು ಬಂದಂತೆ ಮನೋಹರ್ ತಂತ್ರಿಗಳು ಚಂದ್ರಮೌಳೀಶ್ವರ ದೇವಸ್ಥಾನ ಉಡುಪಿ ಇವರ ವೈದಿಕ ವಿಧಿ ವಿಧಾನದಲ್ಲಿ ಇಂದು ಮಹಾ ಮೃತ್ಯುಂಜಯ ಹೋಮ ನಡೆಯಿತು.