ರಸ್ತೆ ಬದಿ ನಿಂತಿದ್ದ ಕಾರಿಗೆ ರಿಕ್ಷಾ ಢಿಕ್ಕಿ, ಚಾಲಕ ಸಾವು

9:18 PM, Tuesday, October 20th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

Sunil Deadಉಡುಪಿ :  ರಿಕ್ಷಾವೊಂದು ರಸ್ತೆ ಬದಿ ನಿಂತಿದ್ದ ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಮೃತಪಟ್ಟ ಘಟನೆ ಗುಂಡಿಬೈಲು ನಾಗನಕಟ್ಟೆ ಸಮೀಪ ಮಂಗಳವಾರ ಸಂಜೆ ವೇಳೆ ನಡೆದಿದೆ.

ಮೃತರನ್ನು ಮೂಡಬೆಟ್ಟುವಿನ ಸುನೀಲ್(44) ಎಂದು ಗುರುತಿಸಲಾಗಿದೆ.

ಅಂಬಾಗಿಲು ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ರಿಕ್ಷಾ, ರಸ್ತೆ ಬದಿ ನಿಂತಿದ್ದ ಕಾರಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ರಿಕ್ಷಾ ಪಲ್ಟಿಯಾಗಿದ್ದು, ಈ ವೇಳೆ ಚಾಲಕ ರಿಕ್ಷಾದಿಂದ ಹೊರಗೆ ಎಸೆಯಲ್ಪಟ್ಟರೆನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಸುನೀಲ್, ಉಡುಪಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English