- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ರಸ್ತೆ ಬದಿ ನಿಂತಿದ್ದ ಕಾರಿಗೆ ರಿಕ್ಷಾ ಢಿಕ್ಕಿ, ಚಾಲಕ ಸಾವು

Sunil Dead [1]ಉಡುಪಿ :  ರಿಕ್ಷಾವೊಂದು ರಸ್ತೆ ಬದಿ ನಿಂತಿದ್ದ ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಮೃತಪಟ್ಟ ಘಟನೆ ಗುಂಡಿಬೈಲು ನಾಗನಕಟ್ಟೆ ಸಮೀಪ ಮಂಗಳವಾರ ಸಂಜೆ ವೇಳೆ ನಡೆದಿದೆ.

ಮೃತರನ್ನು ಮೂಡಬೆಟ್ಟುವಿನ ಸುನೀಲ್(44) ಎಂದು ಗುರುತಿಸಲಾಗಿದೆ.

ಅಂಬಾಗಿಲು ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ರಿಕ್ಷಾ, ರಸ್ತೆ ಬದಿ ನಿಂತಿದ್ದ ಕಾರಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ರಿಕ್ಷಾ ಪಲ್ಟಿಯಾಗಿದ್ದು, ಈ ವೇಳೆ ಚಾಲಕ ರಿಕ್ಷಾದಿಂದ ಹೊರಗೆ ಎಸೆಯಲ್ಪಟ್ಟರೆನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಸುನೀಲ್, ಉಡುಪಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ.