ರೌಡಿಶೀಟರ್ ಸುರೇಂದ್ರ ಬಂಟ್ವಾಳ್ ಚಾಕುವಿನಿಂದ ಇರಿದು ಹತ್ಯೆ

5:38 PM, Wednesday, October 21st, 2020
Share
1 Star2 Stars3 Stars4 Stars5 Stars
(5 rating, 1 votes)
Loading...

Surendra Bantwal

ಮಂಗಳೂರು : ರೌಡಿಶೀಟರ್, ತುಳು ನಟ ಸುರೇಂದ್ರ ಬಂಟ್ವಾಳರನ್ನು ಬಸ್ತಿಪಡ್ಪುವಿನ ಅಪಾರ್ಟ್ಮೆಂಟ್ನಲ್ಲಿ ಚಾಕುವಿನಿಂದ ಇರಿದು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಸ್ತಿಪಡ್ಪುವಿನ ಅಪಾರ್ಟ್ಮೆಂಟ್ನಲ್ಲಿ ಸುರೇಂದ್ರರನ್ನು ಹತ್ಯೆಗೈಯ್ಯಲಾಗಿದೆ. ಸುರೇಂದ್ರ ಬಂಟ್ವಾಳ ಅವರು ಚಾಲಿಪೋಲಿಲು ತುಳು ಚಲನಚಿತ್ರದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಪಾತ್ರ ನಿರ್ವಹಿಸಿದ್ದರು.

ಘಟನೆ ನಿನ್ನೆ ರಾತ್ರಿ ನಡೆದಿದೆ ಎಂದು ಅಂದಾಜಿಸಲಾಗಿದೆ. ಇಂದು ಮಧ್ಯಾಹ್ನದವರೆಗೆ ಮನೆ ಬಾಗಿಲು ತೆರೆಯದ ಹಿನ್ನೆಲೆಯಲ್ಲಿ ಪರಿಶೀಲಿಸಿದಾಗ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ‌.

ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಠಾಣೆ ಪೊಲೀಸರು ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English