ಮೇಲ್ಕಾರ್​​​​​ನ ಗುಡ್ಡೆಯಂಗಡಿ ಬಳಿ ಮಾರಕಾಸ್ತ್ರಗಳಿಂದ ಇರಿದು ರೌಡಿ ಶೀಟರ್ ಹತ್ಯೆ

9:43 PM, Friday, October 23rd, 2020
Share
1 Star2 Stars3 Stars4 Stars5 Stars
(No Ratings Yet)
Loading...

Farooq ಬಂಟ್ವಾಳ: ಶುಕ್ರವಾರ ಸಂಜೆ ಬಂಟ್ವಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮೇಲ್ಕಾರ್ನ ಗುಡ್ಡೆಯಂಗಡಿ ಎಂಬಲ್ಲಿ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಇರಿದು ಹತ್ಯೆ ನಡೆಸಲಾಗಿದೆ.

ರೌಡಿ ಶೀಟರ್ ಉಮ್ಮರ್ ಫಾರೂಕ್ ಅಲಿಯಾಸ್ ಚೆನ್ನಾ ಫಾರೂಕ್ (32)  ಎಂಬಾತನನ್ನು ಗುಂಪೊಂದು ಹತ್ಯೆ ಮಾಡಿದೆ ಎಂದು ಮಾಹಿತಿ ಲಭ್ಯವಾಗಿದೆ.

ಬೈಕಿನಲ್ಲಿ ಹೋಗುತ್ತಿದ್ದ ಫಾರೂಕ್ ಮೇಲೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ತೀವ್ರ ಗಾಯಗೊಂಡ ಫಾರೂಕ್ ಕೊನೆಯುಸಿರೆಳೆದಿದ್ದಾನೆ.

ರೌಡಿಶೀಟರ್ ಫಾರೂಕ್ ಯಾನೆ ಚೆನ್ನ ಫಾರೂಕ್ ಎಂಬಾತನನ್ನು ಆತನ ಸೇಹಿತನೇ ಕೊಲೆ ಮಾಡಿದ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ಸ್ಥಳಕ್ಕೆ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್, ಎಸ್.ಐ.ಪ್ರಸನ್ನ, ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಎರಡು ದಿನಗಳ ಹಿಂದೆ ರೌಡಿಶೀಟರ್ ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣ ಇನ್ನೂ ಹಸಿಯಾಗಿರುವಂತೆಯೇ ಮತ್ತೆಇನ್ನೊಂದು ಹತ್ಯೆ ನಡೆದಿದೆ.

Farooq

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English