- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಸುರೇಂದ್ರ ಬಂಟ್ವಾಳ್ ಕೊಲೆ ಆರೋಪಿ ಸತೀಶ್ ಕುಲಾಲ್ ಮತ್ತು ಇನ್ನೊಬ್ಬ ಸಹಚರನ ಬಂಧನ

Surendra Bantwal [1]ಬಂಟ್ವಾಳ : ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಆ.20ರಂದು ರಾತ್ರಿ ಸುರೇಂದ್ರ ಬಂಟ್ವಾಳ್ ನನ್ನು ಬಿ.ಸಿ.ರೋಡಿನ ಪ್ಲ್ಯಾಟ್ ನಲ್ಲಿ ಚೂರಿಯಿಂದ ಇರಿದು ಹತ್ಯೆಗೈದ ಪ್ರಕರಣದ ಪ್ರಮುಖ ಆರೋಪಿಗಳಾದ ಸುರೇಂದ್ರನ ಆಪ್ತ ಸ್ನೇಹಿತ ಬಂಟ್ವಾಳ ನಿವಾಸಿ ಸತೀಶ್ ಕುಲಾಲ್ ಮತ್ತು ಕಿನ್ನಿಗೋಳಿ ನಿವಾಸಿ ಗಿರೀಶ್ ಯಾನೆ ಗಿರಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳಿಬ್ಬರು ಕಾಸರಗೋಡು ಕಡೆಯಿಂದ ಬಾಡಿಗೆ ವಾಹನದಲ್ಲಿ ಬಂಟ್ವಾಳ ಕಡೆ ಶನಿವಾರ ರಾತ್ರಿ ಬರುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಬಂಟ್ವಾಳ ಡಿವೈಎಸ್ಪಿ ವೆಲೆಂಟೈನ್ ಡಿಸೋಜಾ ಮತ್ತು ಪೊಲೀಸರ ತಂಡ ಕಾರನ್ನು ತಡೆದು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೆ ಒಳಪಡಿಸಿದ್ದಾರೆ.

ಈ ಪ್ರಕರಣದ ಬಳಿಕ ಆರೋಪಿ ಸತೀಶ್ ಕುಲಾಲ್ 2 ನಿಮಿಷ 17 ಸೆಕೆಂಡಿನ ಆಡಿಯೊ ಒಂದನ್ನು ಮಾಡಿ ಕೊಲೆ ನಾನೇ ಮಾಡಿದ್ದು, ಇದು ಉಡುಪಿಯಲ್ಲಿ ನಡೆದ ಕಿಶನ್ ಹೆಗ್ಡೆ ಕೊಲೆಗೆ ಪ್ರತಿಕಾರ ಎಂದು ಹೇಳಲಾಗಿದ್ದು, ಅದು ವೈರಲ್ ಆಗಿತ್ತು. ಆದಾದ ನಾಲ್ಕು ದಿನದ ಬಳಿಕ ಕೊಲೆ ಆರೋಪಿಗಳಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

satish-Kulal [2]