[1]ಬಂಟ್ವಾಳ : ಮೂವರು ದುಷ್ಕರ್ಮಿಗಳ ತಂಡ ಫರಂಗಿಪೇಟೆಯಲ್ಲಿ ಫೊಟೋಗ್ರಾಫರ್ ಒಬ್ಬರ ಮೇಲೆ ದಾಳಿ ನಡೆಸಿ ಹತ್ಯೆಗೆ ಯತ್ನಿಸಿರುವ ಘಟನೆ ಬುಧವಾರ ರಾತ್ರಿ ವೇಳೆ ನಡೆದಿದೆ.
ಫರಂಗಿಪೇಟೆಯಲ್ಲಿರುವ ಪೂಂಜಾ ಕಾಂಪ್ಲೆಕ್ಸ್ ನಲ್ಲಿರುವ ತೃಷಾ ಸ್ಟುಡಿಯೋ ಮಾಲಕ ದಿನೇಶ್ ಕೊಟ್ಟಿಂಜ ಎಂಬವರ ಮೇಲೆ ಅಪರಿಚಿತ ವ್ಯಕ್ತಿಗಳು ರಾತ್ರಿ ತಲವಾರು ದಾಳಿ ನಡೆಸಿದ್ದಾರೆ.
ದಿನೇಶ ಅವರ ಹೊಟ್ಟೆಯಭಾಗಕ್ಕೆ ಮೊದಲು ಇರಿಯಲಾಗಿದೆ. ಹಲ್ಲೆಯನ್ನು ತಡೆಯಲೆತ್ನಿಸಿದ್ದಾಗ ಕೈ ಬೆರಳು ತುಂಡಾಗಿದೆ ಮತ್ತು ತಲೆಯ ಹಿಂಬದಿಗೆ ಗಂಭೀರ ಗಾಯಗಳಾಗಿದೆ.
ಗಂಭೀರ ಸ್ಥಿತಿಯಲ್ಲಿ ಗಾಯಗೊಂಡ ದಿನೇಶ್ ಅವರನ್ನು ಮಂಗಳೂರು ಎಜೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ದಿನೇಶ್ ಶೆಟ್ಟಿಯವರು ಬಿಜೆಪಿ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದರು. ಇತ್ತೀಚೆಗೆ ಹಿಂದೂ ಹುಡುಗಿಯೊಬ್ಬಳನ್ನು ದುಷ್ಕರ್ಮಿಗಳು ಅತ್ಯಾಚಾರಕ್ಕೆ ಯತ್ನಿಸಿದಾಗ, ಆಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಅದೇ ಕಾರಣದಿಂದ ಹಲ್ಲೆ ನಡೆದಿದೆ ಎಂದು ಹೇಳಲಾಗುತ್ತಿದೆ.
ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಷಿಯೇಶನ್ ವತಿಯಿಂದ ದುಷ್ಕರ್ಮಿಗಳನ್ನು ಬಂಧಿಸಿ ತನಿಖೆ ನಡೆಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗು ಪೊಲೀಸ್ ಇಲಾಖೆಗೆ ಆಗ್ರಹಿಸಿದ್ದಾರೆ.
ಸ್ಥಳಕ್ಕೆ ಬಂಟ್ವಾಳ ಡಿ.ವೈ.ಎಸ್.ಪಿ ವೆಲೆಂಟೈನ್ ಡಿ ಸೋಜ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್, ಎಸ್. ಐ.ಪ್ರಸನ್ನ ಬೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.