ಕೂಳೂರು ಮೇಲ್ಸೇತುವೆಯಿಂದ ಹಾರಿದ ವ್ಯಕ್ತಿ ನಾಪತ್ತೆ

7:20 PM, Tuesday, November 3rd, 2020
Share
1 Star2 Stars3 Stars4 Stars5 Stars
(5 rating, 1 votes)
Loading...

Kuluru River ಮಂಗಳೂರು : ಪ್ರತ್ಯಕ್ಷದರ್ಶಿಯೊಬ್ಬರು  ಕೂಳೂರು ಮೇಲ್ಸೇತುವೆಯಿಂದ ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವ ನದಿಗೆ ಹಾರಿರುವ  ಬಗ್ಗೆ  ಪೊಲೀಸರಿಗೆ ದೂರು  ನೀಡಿದ ಹಿನ್ನಲೆಯಲ್ಲಿ ಶೋಧ ಕಾರ್ಯ ಆರಂಭಿಸಿದ್ದಾರೆ.

ಇಂದು ಬೆಳಗ್ಗೆ 10:30ರ ಸುಮಾರಿಗೆ ವ್ಯಕ್ತಿಯೊಬ್ಬರು ಮೇಲ್ಸೇತುವೆಯಲ್ಲಿ ಸ್ವಲ್ಪ ನಡೆದು ಬಳಿಕ ನದಿಗೆ ಹಾರಿದ್ದಾರೆ ಎಂದು ಪ್ರತ್ಯಕ್ಷದರ್ಶಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಕೂಡಲೇ‌‌ ಕಾರ್ಯಪ್ರವೃತ್ತರಾದ ಪೊಲೀಸರು ಸ್ಥಳಕ್ಕಾಗಮಿಸಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಪಣಂಬೂರು ಹಾಗೂ ಕಾವೂರು ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಜತೆಗೆ ಅಗ್ನಿಶಾಮಕ ದಳವೂ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿದೆ. ಆದರೆ ಇದುವರೆಗೆ ಯಾರೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.

Kuluru River

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English