[1]ವಿಟ್ಲ: ಪುಣಚಾ ಗ್ರಾಮದ ಪಾಲಾಸತ್ತಡ್ಕ ಎಂಬಲ್ಲಿ ಜಲ್ಲಿ ಸಾಗಿಸುತ್ತಿದ್ದ ಟಿಪ್ಪರ್ ಲಾರಿ ಪಲ್ಟಿ ಹೊಡೆದು ಚಾಲಕ ದಾರುಣವಾಗಿ ಸಾವನ್ನಪ್ಪಿ, ಕ್ಲೀನರ್ ಗೆ ಗಾಯಗಳಾಗಿದೆ.
ಪುಣಚಾ-ಪುತ್ತೂರು ರಸ್ತೆಯ ಪಾಲಾಸತ್ತಡ್ಕ ದಲ್ಲಿ ಬ್ರೇಕ್ ವೈಫಲ್ಲಕ್ಕೀಡಾದ ಟಿಪ್ಪರ್ ಲಾರಿ ರಸ್ತೆ ಬದಿ ಡಿಕ್ಕಿಹೊಡೆದು ಪಲ್ಟಿಯಾಗಿದೆ. ಅಪಘಾತದ ಸಂದರ್ಭ ಚಾಲಕ ರಫೀಕ್ ಟಿಪ್ಪರ್ ಲಾರಿಯಡಿಯಲ್ಲಿ ಸಿಲುಕಿ ಗಂಟೆಗಳ ಕಾಲ ಒದ್ದಾಡುತ್ತಿದ್ದರೂ ಟಿಪ್ಪರ್ ಮೇಲಕ್ಕೆತ್ತಲು ಸಾಧ್ಯವಾಗಲಿಲ್ಲ. ಬಳಿಕ ಕ್ರೇನ್ ಮೂಲಕ ಲಾರಿಯನ್ನು ಮೇಲಕ್ಕೆತ್ತಿ ದರೂ ಅಷ್ಟರಲ್ಲಾಗಲೇ ಚಾಲಕ ರಫೀಕ್ ಪ್ರಾಣ ಬಿಟ್ಟಿದ್ದಾರೆ. ಕ್ಲೀನರ್ ಗೆ ಸಣ್ಣ ಪುಟ್ಟ ಗಾಯಗಳಾಗಿದೆ.
ಪುಣಚ ಸುತ್ತಮುತ್ತಲಿನಲ್ಲಿ ಹಲವು ಕಲ್ಲಿನ ಕೋರೆಗಳಿಂದ ಕೇರಳ ಕಡೆಗೆ ನಿರಂತರವಾಗಿ ಜಲ್ಲಿ ಸಾಗಾಟ ಮಾಡಲಾಗುತ್ತಿದೆ. ಜಲ್ಲಿ ಕಲ್ಲು ಸಾಗಾಟ ಮಾಡುವ ಲಾರಿಗಳು ಅತೀವೇಗವಾಗಿ ಸಂಚಾರ ಮಾಡುತ್ತಿದೆ. ಇದರಿಂದ ಪಾದಚಾರಿಗಳು ಹಾಗೂ ಚಿಕ್ಕ ಚಿಕ್ಕ ವಾಹನ ಚಾಲಕರು ಆತಂಕಪಡುವಂತಾಗಿದೆ.
ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿ ಪ್ರಕರಣ ದಾಖಲಿಸಿದ್ದಾರೆ.