- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಮಠದಕೆರೆಯಲ್ಲಿ ಸ್ನೇಹಿತರೊಂದಿಗೆ ಈಜಲು ಹೋದ ಯುವಕ ಮೃತ್ಯು

Matadakere [1]ಮಂಗಳೂರು : ಬೆಳುವಾಯಿ ಗ್ರಾಪಂ ವ್ಯಾಪ್ತಿಯ ಮಠದಕೆರೆಯಲ್ಲಿ ಸ್ನೇಹಿತರೊಂದಿಗೆ ಈಜಲು ಹೋದ ಯುವಕನೊಬ್ಬ ಮುಳುಗಿ ಮೃತಪಟ್ಟ ಘಟನೆ ಭಾನುವಾರ ಸಂಜೆ ನಡೆದಿದೆ.

ಸುರತ್ಕಲ್ ಸಮೀಪದ ಕಾಟಿಪಳ್ಳ ನಿವಾಸಿ ನಿಹಾಲ್ ಶಾ ( 20 ) ಮೃತಪಟ್ಟ ಯುವಕ. ನಿಹಾಲ್ ಶಾ ತನ್ನ ಏಳು ಮಂದಿ ಸ್ನೇಹಿತರೊಡನೆ ಭಾನುವಾರ ಸಾಯಂಕಾಲ ಮಠದಕೆರೆಗೆ ಈಜಲು ಬಂದಿದ್ದ. ಈಜುವಾಗ ಏಕಾಏಕಿ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ.

ಬೆಳುವಾಯಿಯ ಅಂಥೋಣಿ ಎಂಬುವರು ನಿಹಾಲ್ ಶಾ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ. ಈ ಸಂಬಂಧ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.