ಸರ್ಕಾರದ ಪರಿಹಾರ ಹಣ ಕೊಡಿಸುತ್ತೇನೆಂದು, ಮಹಿಳೆಯ ಬೆಂಡೋಲೆ ಎಗರಿಸಿದ ಖದೀಮ

10:40 PM, Monday, November 9th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

jayantiಬಂಟ್ವಾಳ : ಕೊರೊನಾ ಸಂಕಷ್ಟದ ಸಮಯದಲ್ಲಿ ಜನರಿಗೆ  ಪರಿಹಾರ ರೂಪದಲ್ಲಿ ನೀಡುವ ಸರ್ಕಾರ ಹಣ  ಪಡೆಯಬೇಕೆಂದರೆ ಮೊದಲು ನಾವು ಹಣ ಕಟ್ಟಬೇಕು ಎಂದು ಹೇಳಿ ಮಹಿಳೆಯಿಂದ ಒಡವೆಗಳನ್ನು ತೆಗೆದುಕೊಂಡು ಹೋಗಿರುವ ಘಟನೆ ಬಂಟ್ವಾಳದ ಮಿನಿ ವಿಧಾನಸೌಧದ ಬಳಿ ನಡೆದಿದೆ.

ವ್ಯಕ್ತಿಯೊಬ್ಬ ಮಹಿಳೆಯೊಂದಿಗೆ ಪರಿಚಿತನಂತೆ ನಟಿಸಿ, ಕೊರೊನಾ ಹಿನ್ನೆಲೆ ನಿಮಗೆ ಒಂದೂವರೆ ಲಕ್ಷ ರೂಪಾಯಿ ಹಣ ಬಂದಿದೆ. ಅದನ್ನು ಪಡೆಯಲು 10 ಸಾವಿರ ರೂಪಾಯಿ ಕಟ್ಟಬೇಕು. ಆಧಾರ್ ಕಾರ್ಡ್ ತೆಗೆದುಕೊಂಡು ಮಿನಿ ವಿಧಾನಸೌಧಕ್ಕೆ ಬನ್ನಿ, ಅರ್ಜಿ ನೀಡಬೇಕು ಎಂದು ಕರೆದು ಕೊಂಡು ಬಂದಿದ್ದಾನೆ. ಇದಕ್ಕೆ ಮಹಿಳೆ, ನನ್ನ ಬಳಿ ಹಣವಿಲ್ಲ. ನನ್ನ ಮಗನ ಬಳಿ ಕೇಳಿ ಕೊಡುತ್ತೇನೆ ಎಂದರೂ, ಅಪರಿಚಿತ ವ್ಯಕ್ತಿ ಮಹಿಳೆ ಬಳಿಯಿದ್ದ ಓಲೆ ತೆಗೆದುಕೊಂಡು ಪರಾರಿಯಾಗಿದ್ದಾನೆ.

ಅಮ್ಟಾಡಿ ತಲೆಂಬಿಲ ನಿವಾಸಿ ಜಯಂತಿ ಎಂಬಾಕೆ, ಬಿ.ಸಿ.ರೋಡಿನ ಮೆಸ್ಕಾಂ ಕಚೇರಿಗೆ ವಿದ್ಯುತ್ ಬಿಲ್ ಪಾವತಿಸಲು ಬಂದಿದ್ದರು. ಈ ವೇಳೆ ಘಟನೆ ನಡೆದಿದ್ದು, ದಿಕ್ಕು ತೋಚದ ಮಹಿಳೆ ಮಗನಿಗೆ ವಿಷಯ ತಿಳಿಸಿದ್ದು, ಬಂಟ್ವಾಳ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English