- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಮಂಗಳೂರು ಬಿಜೆಪಿ ಕಚೇರಿಯಲ್ಲಿ ಗೋಪೂಜೆ

BJP Gopooja [1]ಮಂಗಳೂರು : ಗೋವನ್ನು ವಿಶ್ವದ ತಾಯಿ ಎಂದು ಬಣ್ಣಿಸಲಾಗಿದೆ. ಮನುಷ್ಯನ ಹುಟ್ಟಿನಿಂದ ಸಾವಿನವರೆಗೆ ಗೋವು ಅವಿಭಾಜ್ಯ ಅಂಗವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಗೋಪೂಜೆ ನೆರವೇರಿಸಿದ ಅವರು, ಪ್ರತಿ ವರ್ಷದಂತೆ ಈ ಬಾರಿಯೂ ಬಿಜೆಪಿ ಕಚೇರಿ ಮುಂಭಾಗ ಗೋಪೂಜೆ ನೆರವೇರಿಸಲಾಗಿದೆ ಎಂದು ಹೇಳಿದರು.

ಗೋವಿನ ಸಂರಕ್ಷಣೆ ಎಂದರೆ ರಾಷ್ಟ್ರದ, ಕೃಷಿ ಹಾಗೂ ಕುಟುಂಬದ ಸಂರಕ್ಷಣೆ ಮಾಡಿದಂತೆ . ಹಾಗಾಗಿ ತನ್ನದೆಲ್ಲವನ್ನೂ ತ್ಯಾಗ ಮಾಡುವ ಗೋವಿನ ಪೂಜೆ ಮಾಡುವುದು ಭಾರತೀಯ ಸಂಸ್ಕೃತಿ.ಆದ್ದರಿಂದ ದೀಪಾವಳಿ ಸಂದರ್ಭದಲ್ಲಿ ಗೋವಿಗೆ ಪೂಜೆ ಮಾಡುವ ವಿಶಿಷ್ಟವಾದ ಸಂಸ್ಕೃತಿಯನ್ನು ಬೆಳೆಸಿಕೊಂಡು ಬರಲಾಗಿದೆ ಎಂದು ನಳಿನ್ ಕುಮಾರ್ ಕಟೀಲು  ಹೇಳಿದರು.

ಹೇಳಿದರು [2]