ಯಾರನ್ನು ರಕ್ಷಿಸಲು ಪೊಲೀಸ್ ಅಧಿಕಾರಿಗಳ ವರ್ಗಾವಣೆ – ಯುಟಿ ಖಾದರ್

7:05 PM, Wednesday, November 18th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

UTKhader ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಯಾರನ್ನು ರಕ್ಷಿಸಲು ಪೊಲೀಸ್ ಅಧಿಕಾರಿಗಳ ವರ್ಗಾವಣೆ ಮಾಡುತ್ತಿದ್ದಾರೆ ಅನ್ನೋದು ಗೊತ್ತಾಗುತ್ತಿಲ್ಲ.  ಎಂದು ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಮಾಜಿ ಸಚಿವ ಯುಟಿ ಖಾದರ್ ವಾಗ್ದಾಳಿ ನಡೆಸಿದರು.

ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಾಮಾಣಿಕ ಸಿಸಿಬಿ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಕೊಲೆ, ಹಲ್ಲೆ ಪ್ರಕರಣ ಹೆಚ್ಚುತ್ತಿದೆ. ಸಚಿವರು ಈವರೆಗೆ ಪೊಲೀಸ್ ಇಲಾಖೆಯ ರಿವ್ಯೂ ಮಾಡಿಲ್ಲ ಎಂದು ಖಾದರ್ ಹೇಳಿದರು.

ರಾಜ್ಯ ಸರ್ಕಾರ ಮತ ಬ್ಯಾಂಕ್ ರಾಜಕೀಯ ಮಾಡುತ್ತಿದೆ. ಮರಾಠ ಮತ್ತು ವೀರಶೈವ ನಿಗಮ ಮಂಡಳಿ ಮಾಡುವ ಮೂಲಕ ಓಲೈಕೆ ರಾಜಕಾರಣ ಮಾಡುತ್ತಿದೆ. ಜಿಲ್ಲೆಯಲ್ಲಿ ಬಿಲ್ಲವ, ಬಂಟ, ಕುಲಾಲ, ಗಟ್ಟಿ, ಕೊಟ್ಟಾರಿ ಗಾಣಿಗ ಸೇರಿದಂತೆ ಎಲ್ಲಾ ಜಾತಿಗಳ ಅಭಿವೃದ್ಧಿ ನಿಗಮವಾಗಲಿ ಎಂದು ಸೂಚಿಸಿದರು.

ಶಿರಾ ಉಪಚುನಾವಣೆಗೋಸ್ಕರ ಗೊಲ್ಲರ ಅಭಿವೃದ್ಧಿ ಮಂಡಳಿ, ಬಸವಕಲ್ಯಾಣಗೋಸ್ಕರ ಅಲ್ಲಿ ಮರಾಠಿಗರು ಜಾಸ್ತಿ ಇರುವುದರಿಂದ ಮರಾಠಿ ಅಭಿವೃದ್ಧಿ ನಿಗಮ ಮಾಡಲಾಗುತ್ತಿದೆ. ಉಪಚುನಾವಣೆಗೋಸ್ಕರ ಈ ರೀತಿಯ ಘೋಷಣೆಗಳನ್ನು ಮಾಡುವು ಮೂಲಕ ಆಡಳಿತಾರೂಢ ಬಿಜೆಪಿ ಪಕ್ಷ ಮತ ಬ್ಯಾಂಕ್ ಸೃಷ್ಟಿಸುತ್ತಿದೆ ಎಂದು ಹರಿಹಾಯ್ದರು.

ನಿಗಮ ಮಂಡಳಿಗೆ ನಮ್ಮ ವಿರೋಧವಿಲ್ಲ. ಜಿಲ್ಲೆಯ ಎಲ್ಲಾ ಜಾತಿಗಳ ಅಭಿವೃದ್ಧಿ ಮಂಡಳಿಯನ್ನು ಚುನಾವಣೆಗೆ ಬರುವವರೆಗೆ ಕಾಯದೆ ಮಾಡಲಿ ಎಂದು ಸವಾಲು ಹಾಕಿದರು.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English