[1]ಮಂಗಳೂರು : ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಅವರಿಗೆ ಕೋವಿಡ್ ಸೋಂಕು ದೃಢವಾಗಿದೆ. ಈ ಕುರಿತು ಅಧಿಕೃತವಾಗಿ ಟ್ವಿಟರ್ನಲ್ಲಿ ತಿಳಿಸಿರುವ ಸಚಿವರು, ಕೊರೋನಾ ಸೋಂಕಿನ ಪ್ರಾಥಮಿಕ ಲಕ್ಷಣಗಳ ಹಿನ್ನಲೆ ಪರೀಕ್ಷೆಗೆ ಒಳಗಾಗಿದ್ದೆ. ಈ ವೇಳೆ ಸೋಂಕು ದೃಢಪಟ್ಟಿದೆ. ಈ ಹಿನ್ನಲೆ ಪ್ರತ್ಯೇಕ ವಾಸಕ್ಕೆ ಒಳಗಾಗಿತ್ತಿದ್ದೇನೆ.
ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಒಳಗಾದವರು ಮುಂಜಾಗ್ರತೆ ವಹಿಸುವುದರೊಂದಿಗೆ ಪರೀಕ್ಷೆಗೆ ಒಳಪಡಿ ಎಂದು ಮನವಿ ಮಾಡಿದ್ದಾರೆ. ಇನ್ನು ಸಚಿವರು ಕೊರೋನಾ ಸೋಂಕಿಗೆ ಒಳಗಾಗಿದ್ದ ಸುದ್ದಿ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ.