[1]ಮಂಗಳೂರು : ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ಮತ್ತು ಎಸ್ಪಿ ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸುತ್ತಿರುವ ಮತ್ತು ಸಲ್ಲಿಸಿದ ಎಂಟು ಮಂದಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ ಶುಕ್ರವಾರ ಬೆಂಗಳೂರಿನಲ್ಲಿ ಪ್ರದಾನ ಮಾಡಲಾಯಿತು.
ಪಶ್ಚಿಮ ವಲಯದ ಬೆರಳಚ್ಚು ವಿಭಾಗದ ಡಿವೈಎಸ್ಪಿ ಗೌರೀಶ್ ಎ.ಸಿ., ಪಣಂಬೂರು ಪೊಲೀಸ್ ಇನ್ಸ್ಪೆಕ್ಟರ್ ಆಗಿದ್ದು, ಪ್ರಸ್ತುತ ಬೆಂಗಳೂರು ವಿವೇಕ ನಗರ ಇನ್ಸ್ಪೆಕ್ಟರ್ ಆಗಿರುವ ರಫೀಕ್ ಕೆ.ಎಂ., ಸಿಸಿಬಿ ಎಎಸ್ಐ ಆಗಿರುವ ಹರೀಶ್ ಪದವಿನಂಗಡಿ, ಎನ್ಸಿಪಿಎಸ್ನ ಚಂದ್ರಶೇಖರ್, ಡಿಸಿಐಬಿನ ಉದಯ ರೈ ಮಂದಾರ, ಸಿಎಆರ್ ಹೆಡ್ ಕಾನ್ಸ್ಟೇಬಲ್ (ಕಮಿಷನರ್ ಕಚೇರಿ) ವರುಣ್ ಆಳ್ವ, ಕಾವೂರು ಠಾಣೆ ಹೆಡ್ ಕಾನ್ಸ್ಟೇಬಲ್ ಗೋಪಾಲಕೃಷ್ಣ, ಎಸಿಪಿ ಸೆಂಟ್ರಲ್ನ ಹೆಡ್ ಕಾನ್ಸ್ಟೇಬಲ್ ದಿನೇಶ್ ಎನ್. ಅವರು ಇಲಾಖೆಯಲ್ಲಿ ಸಲ್ಲಿಸಿದ ಅತ್ಯುತ್ತಮ ಸೇವೆಯನ್ನು ಪರಿಗಣಿಸಿ ಮುಖ್ಯಮಂತ್ರಿ ಚಿನ್ನದ ಪದಕ ನೀಡಿ ಗೌರವಿಸಲಾಗಿದೆ.