- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಕುದ್ರೋಳಿ ಸಮೀಪ ಮೆಹೆಂದಿ ಕಾರ್ಯಕ್ರಮಕ್ಕೆ ಬಂದಿದ್ದ ರೌಡಿ ಶೀಟರ್ ಹತ್ಯೆ

Indrajeet [1]ಮಂಗಳೂರು : ರೌಡಿ ಶೀಟರ್ ವೊಬ್ಬನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಕುದ್ರೋಳಿ ಸಮೀಪದ ಕರ್ನಲ್‌ ಗಾರ್ಡನ್ ಬಳಿ ನಡೆದಿದೆ.

ಬೊಕ್ಕಪಟ್ಣ ನಿವಾಸಿ ಇಂದ್ರಜಿತ್ (45) ಹತ್ಯೆಗೊಳಗಾದ ವ್ಯಕ್ತಿ ಎಂದು  ತಿಳಿದುಬಂದಿದೆ.

ಈತ ಪಾಂಡೇಶ್ವರ ಠಾಣಾ ವ್ಯಾಪ್ತಿಯಲ್ಲಿ ರೌಡಿ ಶೀಟರ್ ಆಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಈ ಹಿಂದೆ ಈತನ ಮೇಲೆ ತಲವಾರ್‌ ದಾಳಿ ನಡೆದಿತ್ತು ಎಂಬ ಮಾಹಿತಿ ಲಭಿಸಿದೆ.

ಬುಧವಾರ ರಾತ್ರಿ ಈತನು ಮೆಹೆಂದಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದು ಅಲ್ಲಿ ಯಾವುದೋ ವಿಚಾರಕ್ಕೆ ಗಲಾಟೆ ನಡೆದಿದೆ ಎಂದು ತಿಳಿದು ಬಂದಿದೆ.

ಗುರುವಾರ ನಸುಕಿನ ಜಾವ  2 ಗಂಟೆಗೆ ಈ ಹತ್ಯೆ‌ ನಡೆದಿದೆಯೆನ್ನಲಾಗಿದೆ.

ಇಂದ್ರಜಿತ್ ನನ್ನು‌ ಮಾರಕ ಆಯುಧಗಳಿಂದ ಕೊಚ್ಚಿ ಕೊಲೆ ಮಾಡಿ ಗಾರ್ಡನ್ ಬಳಿ ಎಸೆಯಲಾಗಿದ್ದು, ಬೆಳಗ್ಗೆ 6 ಗಂಟೆ ಸುಮಾರಿಗೆ ಮೃತದೇಹ ಪತ್ತೆಯಾಗಿದೆ.

ಈ ಬಗ್ಗೆ ಸ್ಥಳಕ್ಕೆ ಬರ್ಕೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Indrajeet [2]

 

Indrajeet [3]