ರೌಡಿಶೀಟರ್ ಇಂದ್ರಜಿತ್ ಕೊಲೆ, ಎಂಟು ಮಂದಿ ಪೊಲೀಸರ ವಶಕ್ಕೆ

10:41 PM, Friday, November 27th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

Indrajeet ಮಂಗಳೂರು : ರೌಡಿಶೀಟರ್ ಇಂದ್ರಜಿತ್‌ನನ್ನು ಹಳೆ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ನಡೆಸಲಾಗಿದೆ ಎಂದು ಹೇಳಲಾಗುತ್ತಿದ್ದು ಪ್ರಕರಣಕ್ಕೆ ಸಂಬಂಧಿಸಿ ಎಂಟು ಮಂದಿಯನ್ನು ಬರ್ಕೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಕುದ್ರೋಳಿ ಕರ್ನಲ್ ಗಾರ್ಡನ್ ಬಳಿ ಬುಧವಾರ ತಡರಾತ್ರಿ ರೌಡಿಶೀಟರ್ ಇಂದ್ರಜಿತ್ (28) ಕೊಲೆಯಾಗಿತ್ತು.

ಸ್ನೇಹಿತನೊಬ್ಬನ ವಿವಾಹದ ಮೆಹಂದಿ ಕಾರ್ಯಕ್ರಮಕ್ಕೆಂದು ಇಂದ್ರಜಿತ್ ಬುಧವಾರ ರಾತ್ರಿ ಸುಮಾರು 10 ಗಂಟೆಗೆ ಮನೆಯಿಂದ ಹೊರಹೋಗಿದ್ದು, ಅಲ್ಲಿಂದ ಮರಳಿ ಬರುವ ಸಂದರ್ಭ ಕಾದು ಕುಳಿತಿದ್ದ ಹಂತಕರು ಈ ಕೃತ್ಯ ಎಸಗಿದ್ದಾರೆಂದು ತಿಳಿದು ಬಂದಿದೆ.

ಬರ್ಕೆ ಪೊಲೀಸರು ತನಿಖೆ ಆರಂಭಿಸಿ ಸುಮಾರು 17ಕ್ಕೂ ಅಧಿಕ ಮಂದಿಯನ್ನು ವಿಚಾರಣೆ ನಡೆಸಿದ್ದಾರೆ. ಈ ಪೈಕಿ ಎಂಟು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English