- Mega Media News Kannada - https://kannada.megamedianews.com -

ನಾಲ್ಕನೇ ದಿನವೂ ಪತ್ತೆಯಾಗದ ಓರ್ವ ಮೀನುಗಾರನ ಮೃತದೇಹ

Boat Tragedy [1]ಮಂಗಳೂರು: ಪರ್ಸಿನ್ ಬೋಟ್ ದುರಂತದಲ್ಲಿ ಸಾವಿಗೀಡಾದ ಆರು ಜನರ ಪೈಕಿ ಇನ್ನೋರ್ವನ  ಓರ್ವನ ಮೃತದೇಹ ಪತ್ತೆಗೆ ನಾಲ್ಕನೇ ದಿನ ಕೂಡಾ ಹುಡುಕಾಟ ಮುಂದುವರೆದಿದೆ.

ಶ್ರೀರಕ್ಷಾ ಎಂಬ ಬೋಟ್ ಮೀನುಗಳನ್ನು ತುಂಬಿಸಿಕೊಂಡು ವಾಪಸ್ ಬರುವ ವೇಳೆ ಇತ್ತೀಚೆಗೆ ಅಳಿವೆ ಬಾಗಿಲಿನಲ್ಲಿ ದುರಂತಕ್ಕೀಡಾಗಿತ್ತು. ಪರಿಣಾಮ, ಆರು ಮಂದಿ ಮೀನುಗಾರರು ಮೃತಪಟ್ಟಿದ್ದರು. ಈ ಪೈಕಿ ಐವರ ಮೃತದೇಹ ಪತ್ತೆಯಾಗಿತ್ತು.

ಅನ್ಸಾರ್ ಮೃತದೇಹ ಸಿಕ್ಕಿತಾದರೂ ಸಮುದ್ರದಾಳದಿಂದ ಮೇಲಕ್ಕೆ ತರುವಾಗ ಮುಳುಗು ತಜ್ಞರ ಕೈಜಾರಿ ಮತ್ತೆ ಸಮುದ್ರದಾಳ ಸೇರಿತ್ತು. ಇದಾಗಿ ಎರಡು ದಿನವಾದರೂ ಮೃತದೇಹ ಸಿಕ್ಕಿರಲಿಲ್ಲ. ಈ ಕಾರಣದಿಂದ ಇಂದು ಮತ್ತೆ ಜಿಲ್ಲಾಡಳಿತದ ನೇತೃತ್ವದಲ್ಲಿ ಕೋಸ್ಟ್ ಗಾರ್ಡ್, ಮುಳುಗು ತಜ್ಞರು, ಮೀನುಗಾರರು ಶೋಧ ಮುಂದುವರೆಸಿದ್ದಾರೆ.