ಮಂಗಳೂರು ಮಹಾನಗರಪಾಲಿಕೆಯ ಮಾಜಿ ಮೇಯರ್ ಕೆ. ಕೃಷ್ಣಪ್ಪ ಮೆಂಡನ್ ನಿಧನ

4:37 PM, Friday, December 4th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

Krishnappa mendonಮಂಗಳೂರು : ಹಿರಿಯ ಕಾಂಗ್ರೆಸ್ ಮುಖಂಡ, ಮಂಗಳೂರು ಮಹಾನಗರಪಾಲಿಕೆಯ ಮಾಜಿ ಮೇಯರ್ ಕೆ. ಕೃಷ್ಣಪ್ಪ ಮೆಂಡನ್ (88) ಅವರು ಶುಕ್ರವಾರ  ನಿಧನರಾಗಿದ್ದಾರೆ.

ಅವರು ತನ್ನ ಸಾಮಾಜಿಕ ಹಾಗೂ ರಾಜಕೀಯ ಸೇವೆಯನ್ನು ಕಂಕನಾಡಿ ವಾರ್ಡಿನ ಪಂಚಾಯತ್ ಸದಸ್ಯರಾಗಿ ಆರಂಭಿಸಿದ್ದರು. 1983 ರಿಂದ ಮಂಗಳೂರು ಮಹಾನಗರಪಾಲಿಕೆ ಅಳಪೆ ವಾರ್ಡಿನಿಂದ ಕಾರ್ಪೊರೇಟರ್ ಆಗಿ ಚುನಾಯಿತರಾಗಿದ್ದರು. ನಾಲ್ಕು ಬಾರಿ ಅವರು ಅಳಪೆ ವಾರ್ಡಿನಿಂದ ಕಾರ್ಪೊರೇಟರ್ ಆಗಿ ಚುನಾಯಿಸಲ್ಪಟ್ಟಿದ್ದಾರೆ.

1993 ರಲ್ಲಿ ಅವರು ಮಂಗಳೂರಿನ ಮೇಯರ್ ಆಗಿ ಸೇವೆ ಸಲ್ಲಿಸಿದ್ದರು. ಅದಲ್ಲದೆ, ದ. ಕ. ಜಿಲ್ಲಾ ಗಾಣಿಗರ ಹಾಗೂ ಸಪಲಿಗರ ಸಂಘ ಹಾಗೂ ಕರಾವಳಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಯ ಅಧ್ಯಕ್ಷ ರಾಗಿ ಸೇವೆ ಸಲ್ಲಿಸಿರುತ್ತಾರೆ. ಅತ್ತಾವರದ ಶ್ರೀ ಉಮಮಹೇಶ್ವರ ದೇವಸ್ಥಾನದ ಟ್ರಸ್ಟಿಯಾಗಿ ಹಾಗೂ ಹಲವಾರು ಸಂಘ ಸಂಸ್ಥೆಗಳಲ್ಲಿ ತಮ್ಮ ಅಮೂಲ್ಯವಾದ ಸೇವೆಯನ್ನು ಸಲ್ಲಿಸಿರುತ್ತಾರೆ.

ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.  ಕೃಷ್ಣಪ್ಪ ಮೆಂಡನ್ ಅವರ ನಿಧನಕ್ಕೆ ಅನೇಕ ಗಣ್ಯರು  ಸಂತಾಪ ವ್ಯಕ್ತಪಡಿಸಿರುತ್ತಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English