[1]ಮಂಗಳೂರು : ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ನಗರದ ಹೊರವಲಯದ ಪದವಿನಂಗಡಿ ಬಳಿ ಅಶ್ವತ್ಥಮರದ ಕಟ್ಟೆ ಎದುರುಗಡೆ ಶಿವಾಜಿ ಮೂರ್ತಿ ಇರಿಸಲು ಸಿದ್ಧತೆಗಳನ್ನು ನಡೆಸಿದ್ದರು, ಇದಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳಕ್ಕಾಗಮಿಸಿ ಮೂರ್ತಿ ಸ್ಥಾಪಿಸಲು ಕಟ್ಟಲಾಗಿದ್ದ ಕಟ್ಟೆಯನ್ನು ತೆರವುಗೊಳಿಸಿದ್ದಾರೆ.
ಪದವಿನಂಗಡಿ ಅಶ್ವತ್ಥಕಟ್ಟೆಯ ಎದುರಿನ ಜಾಗದಲ್ಲಿ ಶಿವಾಜಿ ಮೂರ್ತಿ ಇರಿಸಲು ಹಿಂಜಾವೇ ಕಾರ್ಯಕರ್ತರು ಶನಿವಾರ ರಾತ್ರಿ ಕಟ್ಟೆಯೊಂದನ್ನು ಕಟ್ಟಿ ಕೆಲಸ ಆರಂಭಿಸಲು ಮುಂದಾದಾಗ ಇನ್ನೊಂದು ಗುಂಪಿನಿಂದ ವಿರೋಧ ವ್ಯಕ್ತವಾಯಿತು. ಈ ವಿಚಾರ ಪೊಲೀಸರಿಗೆ ಗೊತ್ತಾಯಿತು. ರವಿವಾರ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮುನ್ನೆಚ್ಚರಿಕೆ ಕ್ರಮವಾಗಿ ಕಾರ್ಯಕರ್ತರಿಂದಲೇ ಕಟ್ಟೆಯನ್ನು ತೆರವುಗೊಳಿಸಿದ್ದಾರೆ.