ಮಂಗಳೂರು : ಮದುವೆ ಮನೆಗೆ ದಾರಿ ಕೇಳಿದ್ದಕ್ಕೆ ಹಲ್ಲೆ, ರೌಡಿಶೀಟರ್ ಮತ್ತು ಸಹಚರರ ಬಂಧನ

12:03 AM, Wednesday, December 9th, 2020
Share
1 Star2 Stars3 Stars4 Stars5 Stars
(No Ratings Yet)
Loading...

Gowrishಮಂಗಳೂರು :  ಮದುವೆ ಮನೆಯಲ್ಲಿ ನಡೆದ ದಾಂಧಲೆಗೆ ಸಂಬಂಧಿಸಿ ರೌಡಿಶೀಟರ್ ಸಹಿತ ನಾಲ್ವರನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ.

ಸ್ಥಳೀಯ ನಿವಾಸಿ ರೌಡಿಶೀಟರ್ ಗೌರೀಶ್, ಆತನ ಸ್ನೇಹಿತರಾದ ತಲಪಾಡಿಯ ಸುಮಂತ್, ಬಜಾಲ್ ಸುಮಂತ್ ಮತ್ತು ಆಶಿತ್ ಬಂಧಿತ ಆರೋಪಿಗಳು. ಇವರು ಪಡೀಲ್ ಬಡ್ಲಗುಡ್ಡೆಯಲ್ಲಿ ಸೋಮವಾರ ರಾತ್ರಿ ಮದುವೆಗೆ ಬಂದವರಿಗೆ ಹಲ್ಲೆ ನಡೆಸಿದ್ದರು.

ಮುಂಬೈಯಿಂದ ಮದುವೆ ಕಾರ್ಯಕ್ರಮಕ್ಕೆ ಬಂದ ಅತಿಥಿಗಳನ್ನು ಗೌರೀಶ್ ತನ್ನ ಗೆಳೆಯರನ್ನು ಕರೆಸಿ ಮಹಿಳೆಯರನ್ನು ಸಹಿತ ಎಳೆದಾಡಿ, ಹೆಲ್ಮೆಟ್‌ನಿಂದ ಹಲ್ಲೆ ಮಾಡಿದ್ದಾನೆ ಎಂದು ದೂರಲಾಗಿದೆ.

ಗೌರೀಶ್ ಬಳಿ ಮದುವೆ  ಮನೆಗೆ ದಾರಿ ಕೇಳಿದ್ದೆ ದಾಂಧಲೆಗೆ ಕಾರಣ ಎನ್ನಲಾಗಿದೆ.

ಕಂಕನಾಡಿ ನಗರ ಠಾಣೆಯ ಹೆಡ್‌ ಕಾನ್‌ಸ್ಟೇಬಲ್ ನಾರಾಯಣ ಎಂ.ಕೆ. ಸ್ಥಳಕ್ಕೆ ತೆರಳಿ ಗೌರೀಶ್ ನನ್ನು ವಶಕ್ಕೆ ಪಡೆಯಲು ಮುಂದಾದಾಗ ಆರೋಪಿಗಳು ಸಮವಸ್ತ್ರಕ್ಕೆ ಕೈ ಹಾಕಿ ಎಳೆದಾಡಿ ಕರ್ತವ್ಯಕ್ಕೆ ಅಡ್ಡಿ ಉಂಟು ಮಾಡಿದ್ದರು. ಅಲ್ಲದೆ, ಬೆದರಿಕೆಯೊಡ್ಡಿ ಪರಾರಿಯಾಗಿದ್ದಾರೆ ಎಂದು ದೂರು ನೀಡಿದ್ದು, ಪ್ರಕರಣ ದಾಖಲಾಗಿತ್ತು.

ಕಂಕನಾಡಿ ನಗರ ಠಾಣೆ ಪೊಲೀಸರು ಅದೇ ದಿನ  ರಾತ್ರಿಯೇ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ರೌಡಿಶೀಟರ್ ಗೌರೀಶ್ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದು, ಕಳೆದ ವರ್ಷ ಆತನನ್ನು ಬಂಧಿಸಲು ಹೋದಾಗ ಪೊಲೀಸರ ಮೇಲೆ ಹಲ್ಲೆ ಮುಂದಾಗಿದ್ದ. ಆ ಸಂದರ್ಭ ಆತನ ಕಾಲಿಗೆ ಗುಂಡು ಹೊಡೆದು ಪೊಲೀಸರು ಬಂಧಿಸಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English