- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಯುವಕನೋರ್ವನ ಮೇಲೆ ದುಷ್ಕರ್ಮಿಗಳ ತಲವಾರು ದಾಳಿ

Tajuddin [1]ಮಂಗಳೂರು: ಮೂವರು ದುಷ್ಕರ್ಮಿಗಳ ತಂಡ ಯುವಕನೋರ್ವನ‌ ಮೇಲೆ ಅಡ್ಡೂರಿನಲ್ಲಿ ತಲವಾರು ದಾಳಿ ನಡೆಸಿದ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.

ಅಡ್ಡೂರು ನಿವಾಸಿ ಮುಹಮ್ಮದ್ ತಾಜುದ್ದೀನ್ (30) ತಲವಾರು ದಾಳಿಯಿಂದ‌ ಗಾಯಗೊಂಡವರು ಎಂದು ತಿಳಿದುಬಂದಿದೆ.

ತಾಜುದ್ದೀನ್ ಮಂಗಳವಾರ ತಡರಾತ್ರಿ ಅಡ್ಡೂರಿನಿಂದ ಮನೆ ಕಡೆಗೆ ತೆರಳುತ್ತಿದ್ದು, ಈ ವೇಳೆ‌ ಮೂವರಿದ್ದ ದುಷ್ಕರ್ಮಿಗಳ ತಂಡ ಯುವಕನ‌ ಮೇಲೆ ತಲವಾರು ಬೀಸಿದ್ದಾರೆ. ಪರಿಣಾಮ ಯುವಕನ ತೊಡೆ ಭಾಗ, ಕೈ ಸಹಿತ ವಿವಿಧೆಡೆ ಗಾಯಗಳಾಗಿವೆ.

ಹಳೆ‌ ವೈಷಮ್ಯದಿಂದಲೇ ದಾಳಿ ನಡೆದಿದೆ ಎಂದು ಶಂಕೆ ವ್ಯಕ್ತವಾಗಿದೆ. ಗಾಯಾಳುವನ್ನು ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕುರಿತು ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.