ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠೀ, ಬ್ರಹ್ಮರಥೋತ್ಸವ

9:54 PM, Sunday, December 20th, 2020
Share
1 Star2 Stars3 Stars4 Stars5 Stars
(4 rating, 1 votes)
Loading...

Kukke subrahmanya ಸುಬ್ರಹ್ಮಣ್ಯ : ದಕ್ಷಿಣ ಭಾರತದ ಪ್ರಮುಖ ನಾಗ ಕ್ಷೇತ್ರ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠೀ ಮಹೊತ್ಸವ ಸಂಪನ್ನಗೊಂಡಿದೆ.

ದೇವಳದ ರಾಜಮಾರ್ಗದಲ್ಲಿ ಯಶಸ್ವಿನಿ ಅನೆಯೊಂದಿಗೆ ಸಂಭ್ರಮದ ಬ್ರಹ್ಮರಥೋತ್ಸವ ಜರಗಿತು.ಕೋಟ್ಯಾಂತರ ಭಕ್ತರ ಅರಾಧ್ಯ ದೈವ ಸುಬ್ರಹ್ಮಣ್ಯ ಸ್ವಾಮಿ ಮುಂಜಾನೆಯ 7.25 ರ ಧನು ಲಗ್ನ ಸುಮುಹೂರ್ತದಲ್ಲಿ ಬ್ರಹ್ಮರಥದಲ್ಲಿ ರಥಾರೂಢನಾಗಿ ಭಕ್ತರಿಗೆ ದರ್ಶನ ನೀಡಿದ್ದಾನೆ. ಕೋವಿಡ್ ಕಾರಣದಿಂದಾಗಿ ಪರ ಊರಿನ ಭಕ್ತರಿಗೆ ಪ್ರವೇಶ ನಿರ್ಬಂನಿರ್ಬಂಧವಿದ್ದರೂ ಕೂಡಾ ಅಪಾರ ಸಂಖ್ಯೆಯಲ್ಲಿ ಭಕ್ತರು  ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮ ರಥೋತ್ಸವವನ್ನು ನೋಡಿ ಕಣ್ತುಂಬಿಕೊಂಡರು.

ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿ ಎಡೆಸ್ನಾನವನ್ನು ರದ್ದುಪಡಿಸಲಾಗಿತ್ತು. ಆದರೆ  ಕೆಲವೇ ಕೆಲವು ಮಂದಿ ಬೀದಿ ಮಡೆ ಸ್ನಾನ ಮಾಡುವ ದೃಶ್ಯ ಕಂಡು ಬಂತು. ಕೊರೊನಾ ಹಿನ್ನೆಲೆಯಲ್ಲಿ ಜಾತ್ರೆ ವೇಳೆ ಸಂತೆ ವ್ಯಾಪಾರ ಅಂಗಡಿಗಳನ್ನು ನಿರ್ಬಂಧಿಸಲಾಗಿದೆ. ಜಾತ್ರಾ ವೇಳೆ ಗರಿಷ್ಠ ಪ್ರಮಾಣದಲ್ಲಿ ಕೋವಿಡ್‌-19 ನಿಯಮ ಪಾಲನೆ ಮಾಡಲು ಕ್ರಮ ಕೈಗೊಳ್ಳಲಾಗಿತ್ತು.

ಚಿತ್ರ :  ಶಾಂತಲಾ ಸ್ಟುಡಿಯೋ

Kukke Subrahmanya

Kukke Subrahmanya

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English