ದಕ್ಷಿಣ ಕನ್ನಡ ಜಿಲ್ಲೆಯ ನಾಲ್ಕು ತಾಲೂಕು ಗಳಲ್ಲಿ ರವಿವಾರ ಎರಡನೇ ಹಂತದ ಚುನಾವಣೆ

9:25 PM, Saturday, December 26th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

vote ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ನಾಲ್ಕು ತಾಲೂಕಿನ 114 ಗ್ರಾಪಂಗಳಿಗೆ ರವಿವಾರ ಬೆಳಗ್ಗೆ 7ರಿಂದ ಸಂಜೆ 5ರವರೆಗೆ ಎರಡನೇ ಹಂತದ ಚುನಾವಣೆ ನಡೆಯಲಿದ್ದು, ಮತದಾನ ಕೇಂದ್ರಗಳ ಸುತ್ತ 200 ಮೀ. ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಹೇರಲಾಗಿದೆ.

ಬೆಳ್ತಂಗಡಿಯ 46, ಪುತ್ತೂರಿನ 22, ಕಡಬದ 21, ಸುಳ್ಯದ 25 ಸಹಿತ 114 ಗ್ರಾಪಂಗಳ 1541 ಸ್ಥಾನಗಳಿಗೆ ಚುನಾವಣೆ ನಡೆಯಬೇಕಿತ್ತು. ಆ ಪೈಕಿ 41 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದ ಕಾರಣ ರವಿವಾರ 1,500 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಅಂತಿಮವಾಗಿ ಕಣದಲ್ಲಿರುವ 3,421 ಅಭ್ಯರ್ಥಿಗಳ ಪೈಕಿ ಅನುಸೂಚಿತ ಜಾತಿಯ 371, ಅನುಸೂಚಿತ ಪಂಗಡದ 272, ಹಿಂದುಳಿದ ‘ಅ’ ವರ್ಗದ 699, ಹಿಂದುಳಿದ ‘ಬಿ’ ವರ್ಗದ 138, ಸಾಮಾನ್ಯ 1,921 ಅಭ್ಯರ್ಥಿಗಳು ಸೇರಿದ್ದಾರೆ.

ಡಿ.27ರಂದು ನಡೆಯುವ ಗ್ರಾಪಂ ಎರಡನೆ ಹಂತದ ಚುನಾವಣೆಯ ಹಿನ್ನೆಲೆಯಲ್ಲಿ ಬೆಳ್ತಂಗಡಿ, ಪುತ್ತೂರು, ಸುಳ್ಯ, ಕಡಬ ತಾಲೂಕಿನಲ್ಲಿ ಡಿ.27ರ ಸಂಜೆ 5 ಗಂಟೆಯವರೆಗೆ ಮತದಾನ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144ರನ್ವಯ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೆಶಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English