[1]ಮಂಗಳೂರು: ನಗರದ ತಹಶೀಲ್ದಾರ್ ಕಚೇರಿ ಮೇಲೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು, ಎಸ್ಡಿಎ ಕ್ಲಾರ್ಕ್ ಒಬ್ಬರನ್ನು ರೆಡ್ ಹ್ಯಾಂಡ್ ಆಗಿ ಮಂಗಳವಾರ ಬಂಧಿಸಿದ್ದಾರೆ.
ಮೊಹಮ್ಮದ್ ರಫೀಕ್ (42) ಬಂಧಿತ ಆರೋಪಿಯಾಗಿದ್ದು, ಕಚೇರಿಯ ಕೆಲಸವೊಂದನ್ನು ಮಾಡಿಕೊಡಲು ಹಿರಿಯ ನಾಗರೀಕರೊಬ್ಬರಿಂದ 40 ಸಾವಿರ ರೂ. ಲಂಚದ ಬೇಡಿಕೆ ಇಟ್ಟಿದ್ದ ಎಂಬ ಆರೋಪ ಕೇಳಿ ಬಂದಿತ್ತು.
ಸಂತ್ರಸ್ತರು ದೂರು ದಾಖಲಿಸಿರುವ ಹಿನ್ನೆಲೆ ಆರೋಪಿಗೆ ನಗದು ನೀಡುತ್ತಿದ್ದ ಸಂದರ್ಭ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತಕ್ಷಣ ಆರೋಪಿಯನ್ನು ಬಂಧಿಸಿ, ನಗದು ವಶಕ್ಕೆ ಪಡೆಯಲಾಗಿದೆ ಎಂದು ಎಸಿಬಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.