ಸುರತ್ಕಲ್ : ಭಜನಾ ಮಂದಿರ, ದೈವಸ್ಥಾನ ಕಳವು ಆರೋಪಿ ಬಂಧನ

5:28 PM, Monday, January 11th, 2021
Share
1 Star2 Stars3 Stars4 Stars5 Stars
(No Ratings Yet)
Loading...

rajesh naik ಮಂಗಳೂರು: ಸುರತ್ಕಲ್ ಸಮೀಪ ಭಜನಾ ಮಂದಿರ, ದೈವಸ್ಥಾನಗಳಲ್ಲಿ ಕಳವು ಮಾಡಿದ ಪ್ರಕರಣದ ಆರೋಪಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.

ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಳಾಯಿ ನಂದನಜಲು ರವಿ ಶೆಟ್ಟಿ ಅವರ ದೈವಸ್ಥಾನ, ಇಡ್ಯಾ ಗ್ರಾಮದ ಗುಡ್ಡೆಕೊಪ್ಪಳ ಜಾರು ಮನೆ ದೈವಸ್ಥಾನ ಹಾಗೂ ಶ್ರೀ ರಾಮಾಂಜನೇಯ ಭಜನಾ ಮಂದಿರ, ಚಿತ್ರಾಪುರ ಗ್ರಾಮದ ಸತೀಶ್ ಸುವರ್ಣರ ಮನೆಯ ದೈವಸ್ಥಾನಗಳಲ್ಲಿ ಕಳವು  ಮಾಡಿದ್ದ.

ಮೂಲತಃ ಧಾರವಾಡ ತಾಲೂಕಿನ ಪ್ರಸ್ತುತ ಉಡುಪಿ ಜಿಲ್ಲೆಯ ಇಂದ್ರಾಳಿ ಸಮೀಪದ ಮಂಚಿ ಗ್ರಾಮ ನಿವಾಸಿ ರಾಜೇಶ್ ನಾಯ್ಕ್ ಅಲಿಯಾಸ್ ರಾಜು ಪಾಮಡಿ ಬಂಧಿತ ಆರೋಪಿ.

ಬಂಧಿತ ಆರೋಪಿಯಿಂದ 47 ಗ್ರಾಂ ತೂಕದ ಚಿನ್ನ ಹಾಗೂ 16 ಕೆಜಿ ತೂಕದ ಬೆಳ್ಳಿಯ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದರ ಒಟ್ಟು ಮೌಲ್ಯ 13.52 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English