ಮಂಗಳೂರು: ಗೋಣಿ ಚೀಲದಲ್ಲಿ ತುಂಬಿಸಿ ಬಾಲಕನ ಅಪಹರಣ ಯತ್ನ

2:19 PM, Friday, January 15th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

Konchadiಮಂಗಳೂರು: ಗೋಣಿ ಚೀಲ ಮುಸುಕು ಹಾಕಿ ಬಾಲಕನನ್ನು ಅಪಹರಿಸಲು ಯತ್ನಿಸಿದ ಕೃತ್ಯ ಬೆಳಕಿಗೆ ಬಂದಿದೆ ನಗರದ ಕೊಂಚಾಡಿಯ ವೆಂಕಟರಮಣ ಮಹಾಲಸಾ ದೇವಾಲಯದ ಸಮೀಪದ ನಡೆದಿದೆ.

ದ್ವಿಚಕ್ರ ವಾಹನದಲ್ಲಿ ಬಂದ ಮೂವರು  ಮಕ್ಕಳ ಕಳ್ಳರು ಎನ್ನಲಾದ ಆಗಂತುಕರು ಸಂಜೆ 7ರ ಹೊತ್ತಿಗೆ ಮನೆಗೆ ಹೋಗುತ್ತಿದ್ದ ಬಾಲಕನ  ಬಳಿ ಬೈಕ್ ನಿಲ್ಲಿಸಿ ಗೋಣಿ ಮುಸುಕು ಹಾಕಿ ಬಾಲಕರನ್ನು ಹಿಡಿಯಲು ಯತ್ನಿಸಿದ್ದಾರೆ  ಅದನ್ನು ಗಮನಿಸಿದ ಜೊತೆಗಿದ್ದ ಇನ್ನೋರ್ವ ಬಾಲಕ ಧೈರ್ಯದಿಂದ ಅವರ ಮೇಲೆ ಕಲ್ಲು, ಮಣ್ಣಿನಿಂದ ದಾಳಿ ನಡೆಸಿದ್ದಾನೆ ಎನ್ನಲಾಗಿದೆ.

ಜೊತೆಗೆ ಹಿಂದಿನಿಂದ ಬಾಲಕರ ಮನೆಯವರು ಬರುತ್ತಿರುವುದನ್ನು ನೋಡಿ ದ್ವಿಚಕ್ರ ವಾಹನ ಏರಿ ಪರಾರಿಯಾಗಿದ್ದಾರೆ. ಈ ಘಟನೆ ಬುಧವಾರ ಸಂಜೆ ನಡೆದಿದ್ದು ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ, ಪೊಲೀಸರು ಕೊಂಚಾಡಿ ಸುತ್ತಮುತ್ತಲಿನ ಸಿಸಿ ಕ್ಯಾಮೆರಾಗಳನ್ನು ಪರಿಶೀಲನೆ ನಡೆಸಿದ್ದಾರೆ. ಅದರಲ್ಲಿ ದ್ವಿಚಕ್ರ ವಾಹನದಲ್ಲಿ ಆಗಮಿಸಿದ ಮೂವರು, ಮಕ್ಕಳ ತಲೆಗೆ ಗೋಣಿ ಮುಸುಕು ಹಾಕುವ ದೃಶ್ಯ ದಾಖಲಾಗಿದೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English